Headlines

ಏಕ ಕಾಲದಲ್ಲಿ 5 ಲಕ್ಷ ಜನ ಕನ್ನಡ ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಕನ್ನಡದ ವಿಶೇಷ ಮೂರು ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ನಡೆದ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಎಂದು ನಡೆದ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ರಾಜ್ಯದ ಇತಿಹಾಸದಲ್ಲಿ ಈ ದಿನವನ್ನು ನೆನಪಿಟ್ಟುಕೊಳ್ಳಬೇಕು. ಈ ಯಶಸ್ವಿ ಕಾರ್ಯಕ್ರಮಕ್ಕೆ ಕಾರಣರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ|Ripponpet news

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ.ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತವರಣ ನಿರ್ಮಾಣವಾಗಿದೆ. ಪಟ್ಟಣದ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರೆಯುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ…

Read More

ಕೇರಳದಿಂದ ಬಂದ 23 ನರ್ಸಿಂಗ್​ ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆ : ನಂಜಪ್ಪ ನರ್ಸಿಂಗ್ ಕಾಲೇಜ್ ಸೀಲ್ ಡೌನ್

ಶಿವಮೊಗ್ಗ: ನಂಜಪ್ಪ ನರ್ಸಿಂಗ್​ ಕಾಲೇಜಿನ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ವಿದ್ಯಾರ್ಥಿಗಳೆಲ್ಲರೂ ಕೇರಳದಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್​ ಕೇರ್​ ಸೆಂಟರ್​ನಲ್ಲಿ ಇರಿಸಲಾಗಿದೆ. ನಂಜಪ್ಪ ಲೈಫ್ ಕೇರ್ ಹಾಗೂ ನಂಜಪ್ಪ ನರ್ಸಿಂಗ್ ಕಾಲೇಜನ್ನು ಸೀಲ್​ಡೌನ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಶೂನ್ಯಕ್ಕೆ ಬಂದಿದ್ದ ಕೊರೊನಾ ಪ್ರಕರಣ ಇತ್ತೀಚಿನ ಪ್ರಕರಣಗಳಿಂದ ಏರಿಕೆಯಾಗುತ್ತಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ.

Read More

ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ

ತೀರ್ಥಹಳ್ಳಿ: ಮಲೆನಾಡಿನ ಸುಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರುವ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಜನವರಿ 2,3,4 ರಂದು ನಡೆಯಲಿದ್ದು  ಈ ಬಾರಿ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆಜಾತ್ರೆಯನ್ನು ಸಂಭ್ರಮ ಹಾಗೂ ವೈಭವಯುತವಾಗಿ ಆಚರಿಸುವುದಾಗಿ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಂದಾಜು 12 ಲಕ್ಷ ರೂ ಮೊತ್ತದ ಬಜೆಟ್ ನೊಂದಿಗೆ  3 ದಿನಗಳ ಕಾಲ ನೆಡೆಯಲಿರುವ ಅದ್ದೂರಿ ಜಾತ್ರೆಗೆ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದ್ದಾರೆ.

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್ ಕಾಶ್ಮೀರದಲ್ಲಿ ಮೃತರಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಪಂಚಭೂತ ಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ತೀರದಲ್ಲಿರುವ ರೋಟರಿ ಚಿತಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪುತ್ರ ಅಭಿಜಯ್ ಬ್ರಾಹ್ಮಣ ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗುಂಡಾ ಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಇದಕ್ಕೂ ಮೊದಲು, ಇಂದು ಬೆಳಿಗ್ಗೆ ೧೦:೩೦ ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅವರ ಪಾರ್ಥಿವ ಶರೀರ ಆಗಮಿಸಿತು. ಮೃತದೇಹವನ್ನು ವಿವಿಧ…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…

Read More

ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident

ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶಕ್ಕೆ|Sand mafia

ರಿಪ್ಪನ್‌ಪೇಟೆ : ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಗುರುವಾರ ರಾತ್ರಿ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ರಾತ್ರಿ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ  ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಜಂಬಳ್ಳಿ ಮೂಗೂಡ್ತಿ ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ…

Read More

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಳಲಿ ಮಠದಲ್ಲಿ ‘ಹರ್ ಘರ್ ತಿರಂಗಾ” — ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧ್ವಜಾರೋಹಣ

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅಂಗವಾಗಿ ಮಳಲಿ  ಮಠದ  ಡಾ. ಶ್ರೀ ಗುರು ನಾಗಭೂಷಣ  ಶಿವಾಚಾರ್ಯ  ಮಹಾಸ್ವಾಮಿಗಳು ಧ್ವಜಾರೋಹಣ  ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ  ಮಾತನಾಡಿ  ರಾಷ್ಟ್ರ ಧ್ವಜವು  ಪ್ರತಿಯೊಂದು ರಾಷ್ಟ್ರದ  ನಾಗರಿಕರ ಐಕ್ಯತೆಯ  ಸಂಕೇತವಾಗಿದೆ. ಹಾಗೆಯೇ ದೇಶದ ಪ್ರತಿಯೊಬ್ಬರು ರಾಷ್ಟ್ರ ಧ್ವಜ ವನ್ನು ಗೌರವಿಸ ಬೇಕು. ಹಾಗೆಯೇ  ನಮ್ಮ ದೇಶ  ಸ್ವಾತಂತ್ರ್ಯದ  ಅಮೃತ ಮಹೋತ್ಸಹ ವವನ್ನು ಆಚರಿಸುತ್ತಿದೆ. ಈ ಬಾರಿಯ ಸ್ವಾತಂತ್ರ್ಯತ್ಸ ವ ನಾಡಿನ ಸಕಲರಿಗೂ  ಒಳಿತನ್ನು ಮಾಡಲಿ ಎಂದು…

Read More