ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು|district news
ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಗಾಜಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಪೊಲೀಸರಿಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫ್ರೀಡಂ ಪಾರ್ಕ್ನಲ್ಲಿ 17 ವರ್ಷದ ಬಾಲಕಿಯೊಬ್ಬಳು, ಗಾಜಿನಿಂದ ತನ್ನ ಕೈಯಿಂದ ಕೊಯ್ದುಕೊಂಡು ಒದ್ದಾಡುತ್ತಿದ್ದಳು. ಈ ವೇಳೆ ERV ವಾಹನದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ಗಳಾದ ರಾಘವೇಂದ್ರ ಹಾಗೂ ಚಾಲಕ ಚನ್ನಕೇಶವ ಅವರು ರಕ್ತದ ಮಡುವಿನಲ್ಲಿದ್ದ ಬಾಲಕಿಯನ್ನು ತಕ್ಷಣ ತಮ್ಮದೇ ವಾಹನದಲ್ಲಿ…