Headlines

ರಿಪ್ಪನ್ ಪೇಟೆ : ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಿಪ್ಪನ್ ಪೇಟೆ : 2021-22 ನೇ ಸಾಲಿನಲ್ಲಿ ನೂತನ  ರಾಷ್ಟ್ರೀಯ ಶಿಕ್ಷಣ ನೀತಿ 2022 ರ ಅಡಿಯಲ್ಲಿ ಪ್ರಥಮ ಬಿಎ, ಬಿಬಿಎ ಮತ್ತು ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ದಿಢೀರ್  ಏರಿಕೆ ಮಾಡಿರುವುದನ್ನು ಖಂಡಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಹಿಂದಿನ ವರ್ಷಗಳಲ್ಲಿ 700 ರೂ ಇದ್ದ ಪರೀಕ್ಷಾ ಶುಲ್ಕವನ್ನು 2020 ರೂ ಗೆ ಏರಿಸಿರುವುದು ಖಂಡನಾರ್ಹ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕುಟುಂಬಕ್ಕೆ…

Read More

BIG NEWS | ಶಿವಮೊಗ್ಗದ ನಡುರಸ್ತೆಯಲ್ಲಿ ಮಲ್ಲೇಶ್ ಮರ್ಡರ್

ಶಿವಮೊಗ್ಗದ ಚಿಕ್ಕಲ್ ರಸ್ತೆಯಲ್ಲಿರುವ ಶಿವಶಂಕರ್ ವೈನ್ ಶಾಪ್ ಬಳಿ ವ್ಯಕ್ತಿಯೋರ್ವನನ್ನ ಕೊಲೆ ಮಾಡಲಾಗಿದೆ.  ಕೊಲೆಯಾದ ವ್ಯಕ್ತಿಯನ್ನ‌ ಮಲ್ಲೇಶ್ ಯಾನೆ ಮಲ್ಲ(35) ಎಂದು ಗುರುತಿಸಲಾಗಿದೆ. ಚಿಕ್ಕಲ್ ನ ಫ್ಲೈ ಓವರ್ ಬಳಿಯ ಶಿವಶಂಕರ್ ವೈನ್ ಶಾಪ್ ಬಳಿಯ ಚಾನೆಲ್ ಏರಿಯಾದಲ್ಲಿ ಮಲ್ಲೇಶ್ ಬೈಕ್ ನಲ್ಲಿ ಬರುವಾಗ ಹಿಂಬದಿ ಬೈಕ್ ನಲ್ಲಿ ಬಂದ ಮೂವರು ಡಿಕ್ಕಿ ಹೊಡೆಸಿದ್ದಾರೆ. ಮಲ್ಲೇಶ್ ಕೆಳಗೆ ಬಿದ್ದಿದ್ದಾನೆ. ಮಲ್ಲೇಶ್ ಕೆಳಗೆ ಬಿದ್ದಿದ್ದನ್ನ‌ ನೋಡಿ ಸ್ಥಳೀಯರು ರಸ್ತೆ ಅಪಘಾತವೆಂದು ಘಟನಾ ಸ್ಥಳಕ್ಕೆ ಓಡಿದ್ದಾರೆ. ಎರಡು ವರ್ಷಗಳ ಹಿಂದೆ…

Read More

ಬುಕ್ಕಿವರೆ – ಬೆಳ್ಳೂರು – ರಿಪ್ಪನ್‌ಪೇಟೆ ಮಾರ್ಗಕ್ಕೆ ನೂತನ KSRTC ಬಸ್ ಸೌಲಭ್ಯ : ಕುಗ್ರಾಮದ ಜನರ ಮೊಗದಲ್ಲಿ ಮೂಡಿದ ಸಂತಸ

ರಿಪ್ಪನ್‌ಪೇಟೆ : ಬೆಳ್ಳೂರು-ಬುಕ್ಕಿವರೆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯವು ಪ್ರಾರಂಭವಾಗಿದ್ದು ಎಲ್ಲರ ಮೊಗದಲ್ಲಿ ಮಂದಹಾಸ ತಂದಿದೆ. ಶರಾವತಿ, ಚಕ್ರಾ, ವರಾಹಿ, ಮಾಣಿ, ಮಡೆನೂರು ಡ್ಯಾಂ ನಿರ್ಮಾಣಕ್ಕಾಗಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಮುಳುಗಡೆ ಸಂತ್ರಸ್ತ ಕುಟುಂಬದವರೇ ಹೆಚ್ಚು ವಾಸಿಸುತ್ತಿರುವ ಕುಗ್ರಾಮಗಳಾದ ಬೆಳ್ಳೂರು, ಬುಕ್ಕಿವರೆ, ಚಾಣಬೈಲು, ದೋಬೈಲು, ಮಸ್ಕಾನಿ, ಕಳಸೆ, ಹಾರೋಹಿತ್ತಲು, ಬಸವಾಪುರ, ಕಲ್ಲುಹಳ್ಳ, ಗುಳಿಗುಳಿ ಶಂಕರ, ಗುಬ್ಬಿಗಾ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಮತ್ತು ಶಾಲಾ – ಕಾಲೇಜ್ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರು…

Read More

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…

Read More

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…

Read More

ಹೊಸನಗರ ಪೊಲೀಸ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪಿ ಐ ಗಳ ವರ್ಗಾವಣೆ :

ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ಮೂರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ‌ ಗುರುರಾಜ್ ಕೆ.ಟಿ, ಹೊಸನಗರ ಪೊಲೀಸ್ ಅಧಿಕಾರಿ ಮಧುಸೂಧನ್ ಮತ್ತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಚೈತನ್ಯ ಸಿ.ಜೆ. ವರ್ಗವಣೆಗೊಂಡಿರುವ ಪಿಐಗಳಾಗಿದ್ದಾರೆ ಪಿಐ ಗುರುರಾಜ್ ಕೆ.ಟಿ ಕಡೂರು…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 1 ರಿಂದ 20 ರವರೆಗೆ  ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು…

Read More

ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು. ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ತೀರ್ಥಹಳ್ಳಿಯ ತಲ್ಲೂರಂಗಡಿ ಬಳಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ : ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನೆಡೆದಿದೆ. ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು  ಉರಿದಿದ್ದು ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More