Headlines

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

ರಿಪ್ಪನ್‌ಪೇಟೆಯಲ್ಲಿ ಇನ್ನು ಮುಂದೆ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ|Rpet

ರಿಪ್ಪನ್‌ಪೇಟೆಯಲ್ಲಿ ಇನ್ನೂ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ’’ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ವತಿಯಿಂದ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಮುಂಗಡ ಹಣ ನೀಡಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ವ್ಯವಸ್ಥಾಪನಾ ಸಮಿತಿ ಹಾಗೂ ಸಿದ್ದಿವಿನಾಯಕ ಸೇವಾ ಸಂಸ್ಥೆ ಭಕ್ತಾಧಿಗಳ ಬಹು ದಿನಗಳ ಬೇಡಿಕೆಯಂತೆ ಈ…

Read More

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ವಿಷಯ ತಿಳಿಯುತಿದ್ದಂತೆ ಹೊಸನಗರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಸೂಕ್ತ ಪರಿಹಾರಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ…

Read More

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು ಶಿವಮೊಗ್ಗ : ಮೊಬೈಲ್‌ ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್‌ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (03-09-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ತುರ್ತು 5 ಗಂಟೆ ವ್ಯತ್ಯಯವಾಗುವುದು. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್‌ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….

Read More

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ! ತೀರ್ಥಹಳ್ಳಿ(Thirthahalli) :ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(Sunday) ಬೆಳಕಿಗೆ ಬಂದಿದೆ  ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ.   ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ…

Read More

ಅಪ್ಪು ನಮನ ಕಾರ್ಯಕ್ರಮದಲ್ಲಿ ಇಡೀ ಊರೂರಿಗೆ ಬಾಡೂಟ ಬಡಿಸಿ ಅಭಿಮಾನ ಮೆರೆದ ಚನ್ನಶೆಟ್ಟಿಕೊಪ್ಪ ಗ್ರಾಮಸ್ಥರು :

ಕರ್ನಾಟಕದ ಪವರ್ ಸ್ಟಾರ್ ಅಪ್ಪು ನಮ್ಮನ್ನ ಅಗಲಿ ಈಗಾಗಲೇ ಒಂದೂವರೆ ತಿಂಗಳು ಕಳೆದಿದೆ ಆದರೆ ಅವರ ಸಾಧನೆ ಸಾರ್ಥಕತೆ ಹಾಗೂ ಅವರ ದಾನ ಧರ್ಮದ ಕಾರ್ಯಗಳು ಎಂದು ಕೂಡ ನಮ್ಮ ಹೃದಯದಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಕರ್ನಾಟಕದ ದೊಡ್ಮನೆ ಹುಡುಗನ ಹೆಸರಿನಲ್ಲಿ ಇದೀಗ ರಾಜ್ಯಾದ್ಯಂತ ಗಲ್ಲಿಗಲ್ಲಿಗಳಲ್ಲಿ ಸರ್ಕಲ್ ಸರ್ಕಲ್ ಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಅಪ್ಪು ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಇದೀಗ ಚನ್ನಶೆಟ್ಟಿಕೊಪ್ಪ ವೃತ್ತಕ್ಕೆ ಪುನೀತ್…

Read More

ಬಾರ್ ಅಂಡ್ ರೆಸ್ಟೋರೆಂಟ್ ಸ್ಥಳಾಂತರ ವಿರೋದಿಸಿ ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ: ಶಾಸಕರಾದ ಹರತಾಳು ಹಾಲಪ್ಪರ ಮಧ್ಯಸ್ಥಿಕೆಯಿಂದ ಪರಿಹಾರ

ರಿಪ್ಪನ್ ಪೇಟೆ:: ಇಲ್ಲಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಪಟ್ಟಣದಿಂದ ಹೊರಗಿದ್ದ ಬಾರ್ ಗಳನ್ನು ಏಕಾಏಕಿ ವಿನಾಯಕ ವೃತ್ತದ ಬಸ್ ನಿಲ್ದಾಣದ ಪಕ್ಕದ ಅಂಗಡಿಯಲ್ಲಿ ತೆರೆದಿದ್ದು ಹಾಗೂ ತೀರ್ಥಹಳ್ಳಿ ರಸ್ತೆಯಲ್ಲಿ ಮತ್ತೊಂದು ಬಾರ್ ಅನ್ನು ತೆರೆಯಲು ಕಾಮಗಾರಿ ನೆಡೆಸುತ್ತಿದ್ದು. ಇದರಿಂದ ಸಾರ್ವಜನಿಕರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಹರತಾಳು ಹಾಲಪ್ಪ ನವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಅಬಕಾರಿ ಜಿಲ್ಲಾಧಿಕಾರಿ ಮತ್ತು ತಾಲೂಕು ಅಬಕಾರಿ…

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More