Headlines

ಹೊಸನಗರ ತಾಲೂಕಿನ ಕುಗ್ರಾಮ ನಿಟ್ಟೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪಿಯುಸಿ ಯಲ್ಲಿ ಶೇಕಡ 91.93 ಫಲಿತಾಂಶ.

ನಿಟ್ಟೂರು: ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿದ್ದಾರೆ ಆದರೆ ಅವಕಾಶಗಳಿಲ್ಲ. ಉತ್ತಮ ಅವಕಾಶ ದೊರೆತರೆ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಹೊಸನಗರ ತಾಲೂಕಿನ ಕುಗ್ರಾಮದಲ್ಲಿರುವ  ಸಂಪೆಕಟ್ಟೆ  ನಿಟ್ಟೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2021 -22 ನೇ ಸಾಲಿನಲ್ಲಿ ನಡೆದ ದ್ವಿತೀಯ  ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಸ್ನೇಹಮಯಿ ಮತ್ತು ಕರ್ತವ್ಯ ನಿಷ್ಠೆ ಇರುವ ಉಪನ್ಯಾಸಕರುಗಳಿದ್ದು ಒಳ್ಳೆಯ ಮಾರ್ಗದರ್ಶನ ನೀಡಿದರೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ  ನಿಟ್ಟೂರು ಸರಕಾರಿ…

Read More

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು…

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More

ಜನಿವಾರ ಪ್ರಕರಣ – ತಪ್ಪಿತಸ್ತರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ

ಜನಿವಾರ ಪ್ರಕರಣ – ತಪ್ಪಿತಸ್ತರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ ಜನಿವಾರ ತೆಗೆಸಿದ ಪ್ರಕರಣ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ತರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಕೆಲಸ ಯಾರೂ ಮಾಡಬಾರದು.ಸಿಇಟಿ ಪರೀಕ್ಷೆ ತಪಾಸಣೆ ನೆಪದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣವನ್ನು ನಾನು…

Read More

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಮಾರುತಿ ಸುಜುಕಿ ಕಾರ್ ನ ಅಧಿಕೃತ ಡೀಲರ್ ಶ್ರುತಿ ಮೋಟಾರ್ಸ್ ರವರ ನೂತನ ಶೋರೂಂ ಹೊಸನಗರ ಪಟ್ಟಣದಲ್ಲಿ ನಾಳೆ (ಗುರುವಾರ) ಶುಭಾರಂಭಗೊಳ್ಳಲಿದೆ. ಹೊಸನಗರ ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶ್ರುಯಿ ಅರೆನಾ ಮೋಟಾರ್ಸ್ ರವರ ನೂತನ ಶಾಖೆ ನಾಳೆ ಬೆಳಿಗ್ಗೆ 08 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ಕಾರು ಅಪಘಾತ – ಸಹಾಯ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವ ಆರಗ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಅಪರಿಚಿತ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿದ್ದ ಶಿವಮೊಗ್ಗದ ನಿವಾಸಿಗಳು ಕಾರ್ಕಳಕ್ಕೆ ಹೋಗುತ್ತಿದ್ದರು‌. ಮಕ್ಕಳ ಪರೀಕ್ಷೆ ಬರೆಸುವ ಕಾರಣಕ್ಕೆ ಶಿವಮೊಗ್ಗದ ಕುಟುಂಬ ಹೋಗುತ್ತಿತ್ತು. ಈ ವೇಳೆ ಅಚಾನಕ್ಕಾಗಿ ರಸ್ತೆ ಪಕ್ಕದ ಚರಂಡಿಗೆ ಅವರ ಕಾರು ಇಳಿದು, ಅದನ್ನು ಮೇಲೆ ತರಲಾಗದೇ ಒದ್ದಾಡುತ್ತಿದ್ದರು. ಈ ಸಂದರ್ಭದಲ್ಲಿ, ಇದೇ ಮಾರ್ಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ದಾರಿಯಲ್ಲಿ ಕಾರು ಅಪಘಾತವಾಗಿದ್ದ ದೃಶ್ಯ ಕಂಡ ತಕ್ಷಣ ತಮ್ಮ ಕಾರು ನಿಲ್ಲಿಸಲು ಡ್ರೈವರ್…

Read More

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More