Headlines

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ  ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್: ಬೇಳೂರು ಗೋಪಾಲಕೃಷ್ಣ ಆರೋಪ|political news

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್, : ಬೇಳೂರು ಗೋಪಾಲ ಕೃಷ್ಣ ಆರೋಪ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರಿಂದ ಭರ್ಜರಿ ಚುನಾವಣಾ ಪ್ರಚಾರ. ರಿಪ್ಪನ್ ಪೇಟೆ :ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ. ಎಂದು ಮಾಜಿ ಶಾಸಕ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದಲ್ಲಿ  ಚುನಾವಣಾ ಪ್ರಚಾರ  ಭಾಷಣ …

Read More

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು  ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಮ ಪಂಚಾಯತಿ ಮಳಲಿಕೊಪ್ಪ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ 15 ಕ್ಕೂ ಹೆಚ್ಚು ನಾಮಫಲಕಗಳು ಧ್ವಂಸವಾಗಿದ್ದು ಪುಂಡರ ಪುಂಡಾಟಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಚಿನ್ ಗೌಡ ಪ್ರತಿನಿಧಿಸುವ ಮಳಲಿಕೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅನುದಾನದಲ್ಲಿ ವಿವಿಧ ಊರುಗಳಿಗೆ ತೆರಳುವ ಮಾರ್ಗಕ್ಕೆ ನಾಮಫಲಕವನ್ನು ಅಳವಡಿಸಲಾಗಿತ್ತು ಆದರೆ ಕಳೆದ ಬುಧವಾರ ರಾತ್ರಿ ಕಿಡಿಗೇಡಿಗಳು 15 ಕ್ಕೂ ಹೆಚ್ಚು ನಾಮಫಲಕವನ್ನು…

Read More

ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟ: ಇಂದು ಒಂದೇ ದಿನ ಶತಕ ದಾಟಿದ ಸೋಂಕಿತರ ಸಂಖ್ಯೆ !

ಶಿವಮೊಗ್ಗ: ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟವಾಗಿದ್ದು ಇಂದು ಒಂದೇ ದಿನ 116 ಮಂದಿ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯ ಜನರಲ್ಲಿಮತ್ತಷ್ಟು ಆತಂಕ ಹೆಚ್ಚಾಗಿದೆ. ಕೊರೋನದ ನಾಗಲೋಟ ನಾಲ್ಕನೇ ದಿನವೂ ಮುಂದುವರೆದಿದೆ.  ವೀಕೆಂಡ್ ಕರ್ಫ್ಯೂಗೆ ಕೊರೋನ‌ ಶತಕ ಭಾರಿಸಿದೆ.  ಜ.6 ರಂದು 19 ಜನರಲ್ಲಿದ್ದ ಕೊರೋನ, ಜ.6 ರಂದು 23 ಜನರಲ್ಲಿ ಕಾಣಿಸಿಕೊಂಡಿತು. ಜ.7 ರಂದು 59 ಜನರಲ್ಲಿದ್ದ ಕೊರೋನ‌ ಇಂದು116 ಜನರಲ್ಲಿ ಪತ್ತೆಯಾಗಿದೆ.  ಆದರೆ ಸೋಂಕಿಗೆ ಯಾರು ಬಲಿಯಾಗಿಲ್ಲವಾದ್ದರಿಂದ, ಸಾವಿನ ಸಂಖ್ಯೆ  1072 ರಲ್ಲೇ ಇದೆ. ತಾಲೂಕುವಾರು ಸೋಂಕಿತರ ವಿವರ: ಶಿವಮೊಗ್ಗ…

Read More

ರಿಪ್ಪನ್‌ಪೇಟೆ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಗಣೇಶ್ ಎನ್ ಕಾಮತ್ ಅವಿರೋಧ ಆಯ್ಕೆ : ನೂತನ ಅಧ್ಯಕ್ಷರನ್ನು ಸನ್ಮಾನಿಸಿದ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಗಣೇಶ್ ಎನ್.ಕಾಮತ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್‌ ಶಂಕರ್ ಶರಾಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಜುನಾಥ ಕಾಮತ್ (ಗೌರವಾಧ್ಯಕ್ಷರು), ಉಮೇಶ್‌ಭಟ್, ಸುಧೀಂದ್ರ ಪ್ರಭು (ಉಪಾಧ್ಯಕ್ಷರು), ಜೆ.ರಾಧಾಕೃಷ್ಣ (ಸಹಕಾರ್ಯದರ್ಶಿ), ಹರೀಶ್‌ಪ್ರಭು (ಸಂಘಟನಾ ಕಾರ್ಯದರ್ಶಿ), ಎಂ.ಆರ್.ಭಟ್ (ಖಜಾಂಚಿ) ಉಳಿದಂತೆ 20 ಕ್ಕೂ ಅಧಿಕ ಕಾರ್ಯಕಾರಿ ಸಮಿತಿಯ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರನ್ನು ಸನ್ಮಾನಿಸಿದ ಮಾಜಿ ಶಾಸಕ ಬೇಳೂರು: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯದ…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More