Headlines

ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ರಿಪ್ಪನ್‌ಪೇಟೆ ಮೂಲದ ಮಹಿಳೆ : ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು|Ripponpet

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಮಹಿಳೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ (22) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಕಾರಗೋಡು ಗ್ರಾಮದ ನಿವಾಸಿ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ ವಿವಾಹ ಎರಡು ವರ್ಷಗಳ ಹಿಂದೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ಚಂದ್ರಶೇಖರ್ ಎಂಬುವವರ ಜೊತೆ ನಡೆದಿತ್ತು. ಮೃತ…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

Ripponpete | ಕೃಷಿ ವಿವಿ ವಿದ್ಯಾರ್ಥಿಗಳಿಂದ ಅಣಬೆ ಕೃಷಿ ಪ್ರಾತ್ಯಕ್ಷಿಕೆ

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಸಿಹಿಜೇನಿ ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಚಿಕ್ಕಜೇನಿ ಗ್ರಾಮದಲ್ಲಿ ಅಣಬೆ ಕೃಷಿಯ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಹಾಗೂ ಗುಂಪು ಚರ್ಚೆಯನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಸಂಕ್ಷಿಪ್ತವಾಗಿ ಅಣಬೆಯ ಬಗ್ಗೆ ಅಣಬೆಯಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿಧಾನ ಪ್ರಾತ್ಯಕ್ಷಿಕೆಯಲ್ಲಿ ರೈತರು ಮನೆಯಲ್ಲಿಯೇ ಸುಲಭವಾಗಿ ಅಣಬೆ ಬೆಳೆಸಲು ಬೇಕಾದ ಸಾಮಗ್ರಿಗಳ ಬಗ್ಗೆ…

Read More

ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.  ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ ಹತ್ತಲು ಪ್ಲ್ಯಾಟ್ ಫಾರಂ ನಂಬರ್​…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಜೈನುಲ್ಲಾ ಬಿನ್‌ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ…

Read More

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ Political and religious leaders unite in support of restoring the Hosanagara constituency, with MP B.Y. Raghavendra assuring full backing during the padyatra concluding event at Ripponpete. ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗೆ ರಾಜಕೀಯ ಮತ್ತು ಧಾರ್ಮಿಕ ನಾಯಕರಿಂದ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹೋರಾಟಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಸಂಸದ ಬಿ.ವೈ….

Read More

Belagavi | ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..?

ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..? ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದ ವಿವಾಹಿತ ಮಹಿಳೆ ಹಾಗೂ ವಿವಾಹಿತ ಪುರುಷ ಓಡಿಹೋಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ರೇಣುಕಾ ವಾಲೀಕರ್ ಹಾಗೂ ಲಗಮ ವಾಲೀಕರ್ ಎಂಬ ವಿವಾಹಿತ ಜೋಡಿಯೊಂದು ಹೊಸ ಜೀವನ ಬಯಸಿ ತಮ್ಮ ಮನೆಯಿಂದ ಓಡಿಹೋಗಿದ್ದಾರೆ. ರೇಣುಕಾ ವಾಲೀಕಾರ್ ಎಂಬುವವರಿಗೆ 10 ವರ್ಷಗಳ ಹಿಂದೆ ಮದುವೆ ಆಗಿತ್ತು. ತಮ್ಮ ಮನೆಯ…

Read More

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್…

Read More

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ…

Read More

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.  ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More
Exit mobile version