ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಸಾವು : ವಿಧಿಯ ಕ್ರೂರತನಕ್ಕೆ ಬಲಿಯಾದ ಪುಟ್ಟ ಕಂದಮ್ಮ

ಸಾಗರ : ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆದಿದೆ. ಶನಿವಾರ ಸಂಜೆ ಸುಮಾರು 5-00 ಗಂಟೆಯ ಸುಮಾರಿಗೆ ಸಾಗರ ನಗರಸಭೆ ವ್ಯಾಪ್ತಿಯ ಅಣಲೇಕೊಪ್ಪದಲ್ಲಿ ವಾಸವಾಗಿದ್ದ ಮೂರ್ತಿಹಾಗೂ ರಾಜೇಶ್ವರಿ ದಂಪತಿಯ ಎರಡನೆ ಮಗು ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕ್ರಿಶಾ (5) ಮೃತಳಾದ ದುರ್ದೈವಿ.  ಮೂರ್ತಿಹಾಗೂ ರಾಜೇಶ್ವರಿ ದಂಪತಿಗಳುಮೂಲತಃ ಸಾಗರ ತಾಲೂಕಿನ ಹೆಗ್ಗೋಡು ಗ್ರಾ.ಪಂ ವ್ಯಾಪ್ತಿಯ ಹೈತೂರಿನ ಕ್ವಾಗೇರಿರವರಗಿದ್ದಾರೆ. ಮೂರ್ತಿ…

Read More

ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read More

ಮಳಲಿ ಮಠದಲ್ಲಿ ಲೋಕಕಲ್ಯಾಣಾರ್ಥ ಇಷ್ಟಲಿಂಗ ಕಾರ್ತಿಕ ದೀಪೋತ್ಸವ ಧರ್ಮಸಮಾರಂಭ| malali matt

ಮಳಲಿಮಠದಲ್ಲಿ ಶ್ರೀ ಗುರು ಪಟ್ಟಾಧಿಕಾರ ರಜತ ಮಹೋತ್ಸವ ರಿಪ್ಪನ್‌ಪೇಟೆ:-ಸಮೀಪದ  ಮಳಲಿ ಮಠದಲ್ಲಿ ನವಂಬರ 26 ರಂದು ಸಂಜೆ 4 ಗಂಟೆಗೆ ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭವನ್ನು  ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ  ಏರ್ಪಡಿಸಲಾಗಿದೆ ಎಂದು  ಮಳಲಿಮಠದ  ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮಿಜಿ ತಿಳಿಸಿದರು. ರಿಪ್ಪನ್‌ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಕಾರ್ತೀಕ ದೀಪೋತ್ಸವ ಸಮಾರಂಭವನ್ನು ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.ಸಮಾರಂಭದ ಆಧ್ಯಕ್ಷತೆಯನ್ನು  ಮಳಲಿಮಠದ…

Read More

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…

Read More

ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ

ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.‌ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ‌ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್​ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…

Read More

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!?

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!? ಶಿವಮೊಗ್ಗ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ…

Read More