Headlines

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ Forest officials in Hosanagara Taluk busted an illegal wildlife hunting operation in Haratalu reserve forest, arresting one accused and seizing 45 live country bombs along with a two-wheeler, while two suspects remain absconding. ಹೊಸನಗರ: ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು…

Read More

ಐದು ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ :ಇಬ್ಬರು ಆರೋಪಿಗಳ ಬಂಧನ

ಶಿರಸಿ : ಐದು ಕೋಟಿ ಮೌಲ್ಯದ ನಿರ್ಬಂಧಿತ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಡಿ.ವೈ.ಎಸ್.ಪಿ ರವಿ ಡಿ ನಾಯ್ಕ ರವರ ನೇತ್ರತ್ವದಲ್ಲಿ ಸಿಪಿಐ ರಾಮಚಂದ್ರ ನಾಯಕ್ ,ಪಿ.ಎಸ್.ಐ ಭೀಮಾಶಂಕರ್ ,ಪಿ.ಎಸ್.ಐ ಈರಯ್ಯ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಐದು ಕೋಟಿ ಮೌಲ್ಯದ ಐದು ಕೆಜಿ ತಿಮಿಂಗಿಲದ ವಾಂತಿ (ಅಂಬೆ ಗ್ರೀಸ್) ಅನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್ ,ಶಿರಸಿಯ ರಾಜೇಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದು,ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ ದೂರು ಸಲ್ಲಿಸಲು ತೆರಳಿದ್ದ ತನ್ನ ತಾಯಿಗೆ ಪೊಲೀಸರು ಬೈದಿದ್ದಾರೆ ಎಂಬ ಕೋಪಕ್ಕೆ ತನ್ನ ಬೈಕ್‌ಗೆ ಯುವಕನೊಬ್ಬ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ವಿಧಾನಸೌಧದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತ ಕೃತ್ಯವೆಸಗಿದ್ದಾನೆ. ಬೆಂಗಳೂರಿನ ವಿಧಾನಸೌಧ ಹಾಗು ಹೈಕೋರ್ಟ್ ನಡುವಿನ ರಸ್ತೆಯಲ್ಲಿ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಬೆಂಕಿ ಹಚ್ಚಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರೋ ಪೃಥ್ವಿರಾಜ್ ನಾನು…

Read More

Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ

Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರೋಡ್ ಷೋ ವೇಳೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿವೈಎಸ್ಪಿ ನೇತ್ರತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ರೋಡ್ ಷೋ ವೇಳೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು ಈ…

Read More

ರಿಪ್ಪನ್‌ಪೇಟೆ : ಅನಾಥ ನಾಯಿ ಮರಿಗಳ ಆರೈಕೆ – ಮಾನವೀಯತೆ ಮೆರೆದ ಪಶು ಪರಿವೀಕ್ಷಕ|rpet

ಮಾನವೀಯತೆ ಮೆರೆದ  ಪಶು ಪರಿವೀಕ್ಷಕ ವಿ ರಂಗಪ್ಪ ರಿಪ್ಪನ್ ಪೇಟೆ : ಪೊದೆಯೊಂದರಲ್ಲಿ ಐದು ಮರಿಗಳಿಗೆ ಜನ್ಮವಿತ್ತ ಬೀದಿ ನಾಯಿ  ಮೂರು ದಿನಗಳ ಒಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.ಇನ್ನೂ ಕಣ್ಣು ಬಿಡದ ಆ ಮರಿಗಳಿಗೆ ಹಾಲುಣಿಸುವ ತಾಯಿ ಬಾರದಿದ್ದಾಗ ಹಸಿವಿನಿಂದ ಕಂಗೆಟ್ಟು ತೀರಾ ಹಠ ಮಾಡುವುದನ್ನು ಕಂಡು ದಾರಿ ಹೋಕರು ಗಮನಿಸಿ ಪಟ್ಟಣದ ಪಶು ವೈದ್ಯಕೀಯ ಪರಿವೀಕ್ಷಕ ವಿ ರಂಗಪ್ಪ ಅವರ ಗಮನಕ್ಕೆ ತಂದರು. ದಿಕ್ಕಿಲ್ಲದ ಆ ಐದು ಮರಿಗಳನ್ನು ಆಸ್ಪತ್ರೆಗೆ ತಂದು ರಟ್ಟಿನ ಬಾಕ್ಸ್ ನಲ್ಲಿ …

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ರಿಪ್ಪನ್‌ಪೇಟೆ : ತೋಟದಲ್ಲಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ವೃದ್ದೆ ಸಾವು|snake bite

ಮನೆ ಹಿಂಬಾಗದ ಅಡಿಕೆ ತೋಟದಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಸಮೀಪದ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಮ್ಮ (72 )ಹಾವು ಕಡಿತದಿಂದ ಮೃತಪಟ್ಟ ಮಹಿಳೆಯಾಗಿದ್ದು, ಜಾನುವಾರುಗಳಿಗೆ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಶನಿವಾರ ಮಧ್ಯಾಹ್ನ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿದೆ. ಕೂಡಲೇ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮಹಿಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ…

Read More

ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More

Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ

ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…

Read More