Headlines

ಶಿವಮೊಗ್ಗದಲ್ಲಿ ನಿನ್ನೆ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ :

ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಪದ್ಮ ಚಲನಚಿತ್ರದ ಮಂದಿರದ ಬಳಿ ವಾಕಿಂಗ್ ಹೋಗಿದ್ದ ವೆಂಕಟೇಶ್ ಎಂಬುವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ಓರ್ವನ ಭೇಟೆಗೆ ಬಲೆ ಬೀಸಿದ್ದಾರೆ. ನಿನ್ನೆ ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿ ವೆಂಕಟೇಶ್ ಎಂಬುವರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಕಲ್ಲಿನಿಂದ…

Read More

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ತೀರ್ಥಹಳ್ಳಿ :  ತಾಲೂಕಿನ ಹಾದಿಗಲ್ಲು ಸಮೀಪ  ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.  ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ  ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…

Read More

ರಿಪ್ಪನ್ ಪೇಟೆ: ಬ್ಯಾಂಕಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ: ರಾಮ ನಾಯಕ್

 ರಿಪ್ಪನ್ ಪೇಟೆ: ಕೆನರಾ ಬ್ಯಾಂಕ್ ರಾಷ್ಟ್ರದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿದ್ದು. ವಾಣಿಜ್ಯ ಕೃಷಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ  ಗಣನೀಯ ಸೇವೆಯನ್ನು ನೀಡುತ್ತಿದೆ ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ರಾಮ ನಾಯಕ್ ಹೇಳಿದರು.  ಶುಕ್ರವಾರ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ನೂತನವಾಗಿ ನಿರ್ಮಿಸಲಾದ ಬಂಗಾರ ಸಾಲದ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆನರಾ ಬ್ಯಾಂಕ್ ಗ್ರಾಹಕರ ಪರವಾಗಿ ಹಗಲಿರುಳು ಶ್ರಮಿಸುತ್ತಿದ್ದು ಎಲ್ಲ ಗ್ರಾಹಕರಿಗೂ ಬ್ಯಾಂಕಿನ ಸೌಲಭ್ಯಗಳು ಸಿಗಲೇಬೇಕೆಂಬ ಸದುದ್ದೇಶದಿಂದ  ಕಾರ್ಯನಿರ್ವಹಿಸುತ್ತಿದೆ. ಕೇಂದ್ರ…

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

ತೀರ್ಥಹಳ್ಳಿ : ಶರಾವತಿ ಚಳುವಳಿ ಪಾದಯಾತ್ರೆಗೆ ಕಲ್ಲುಕೊಪ್ಪದಿಂದ ಚಾಲನೆ :

ತೀರ್ಥಹಳ್ಳಿ : ಶರಾವತಿ ವರಾಹಿ ಚಕ್ರ ಸಾವೇಹಕ್ಲು ಮುಳುಗಡೆ ಸಂತ್ರಸ್ತರಿಗೆ ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಇಂದು ಕಲ್ಲುಕೊಪ್ಪದಲ್ಲಿ ಮೂರು ದಿನ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ ಚುನಾವಣೆ ಇರಲಿ ಬಿಡಲಿ ಸಂತ್ರಸ್ತರಿಗೆ ನ್ಯಾಯಕೊಡಿಸಬೇಕು. ಈ ಭಾಗದಲ್ಲಿ ನೆಲೆಸಿರುವ ಸಂತ್ರಸ್ತರ ಪಟ್ಟಿ ಮಾಡಿ ಈ ಕಾಯ್ದೆ ಅಡಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್ ಗೆ ಪಟ್ಟಿ ನೀಡುವಂತೆ ಕೋರಿದ ಕಾಗೋಡು. ಬಂದವರಿಗೆಲ್ಲಾ ಹಕ್ಕುಪತ್ರ ಕೊಡಿ ಎಂದು ಅರ್ಜಿ ಕೊಡುವುದಲ್ಲವೆಂದು ಗುಡುಗಿದರು….

Read More

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ – ಇಬ್ಬರ ಸ್ಥಿತಿ ಗಂಭೀರ

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪ ಅರೆಕಲ್ಲು ಬಳಿ ಆಗುಂಬೆ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.  ಭದ್ರಾವತಿಯ ದಡಮಘಟ್ಟದಿಂದ ಮಂಗಳೂರು ವೆನ್​ ಲಾಕ್ ಆಸ್ಪತ್ರೆಗೆ ರೋಗಿಯೊಬ್ಬರನ್ನ ನೋಡಲು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಇವತ್ತು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೈಕ್​ ನಲ್ಲಿ ವೆನ್​ಲಾಕ್ ಆಸ್ಪತ್ರೆಗೆ ಇಬ್ಬರು ಭದ್ರಾವತಿಯಿಂದ ಹೊರಟಿದ್ದರು. ಈ ವೇಳೆ ಆಗುಂಬೆಯ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್​ ಸ್ಪೀಡ್​ನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯಾದ ರಭಸಕ್ಕೆ ಬೈಕ್​ನಲ್ಲಿದ್ದ ಇಬ್ಬರು ಸಹ ಬಹಳಷ್ಟು ದೂರ…

Read More

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ:   ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ  ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…

Read More

ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  ….  ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವರದಿ : ಓಂಕಾರ್ ತಾಳಗುಪ್ಪ

Read More

ಮತಾಂತರಕ್ಕೆ ಪ್ರಚೋದನೆ ಮಾಡಿದ ಪಾಸ್ಟರ್ ಅರೆಸ್ಟ್

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಾಸ್ಟರ್ ಒಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಬೊಮ್ಮನಕಟ್ಟೆ ಇ ಬ್ಲಾಕ್ ನಲ್ಲಿ ತೃತೀಯಲಿಂಗಿ ಮಧು ಅನಧಿಕೃತವಾಗಿ ಶೆಡ್ ನಿರ್ಮಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು. ಬೊಮ್ಮನಕಟ್ಟೆ ನಿವಾಸಿಯೊಬ್ಬರ ಪುತ್ರನ ಅನಾರೋಗ್ಯವನ್ನು ದುರ್ಬಳಕೆ ಮಾಡಿಕೊಂಡು ನಿಮ್ಮ ಧರ್ಮ ಪಾಲಿಸಿದರೆ ಕಾಯಿಲೆ ವಾಸಿಯಾಗುವುದಿಲ್ಲ. ನಮ್ಮ ಧರ್ಮಕ್ಕೆ ಮತಾಂತರವಾಗಿ ಪ್ರಾರ್ಥನೆ ಮಾಡಿದರೆ ಕಾಯಿಲೆ ಗುಣವಾಗುತ್ತದೆ ಎಂದು ಹೇಳಿದ್ದು, ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಮತಾಂತರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪಾಸ್ಟರ್ ಮಧುನನ್ನು ಪೊಲೀಸರು…

Read More

ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…

Read More