Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’ ರಿಪ್ಪನ್‌ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು…

Read More

ಜಿಪಂ ತಾ.ಪಂ ಮೀಸಲಾತಿ ಅಧಿಸೂಚನೆ ಮೇಲ್ನೋಟಕ್ಕೆ ಅವೈಜ್ಞಾನಿಕ:ಹರತಾಳು ಹಾಲಪ್ಪ

ರಿಪ್ಪನ್ ಪೇಟೆ :ಜಿಲ್ಲಾ ಪಂಚಾಯತ್ ಹಾಗೂ  ತಾಲೂಕ್  ಪಂಚಾಯತ್ ಚುನಾವಣೆಗೆ ಮೀಸಲಾತಿಯ  ಅಧಿಸೂಚನೆ ಚುನಾವಣಾ ಆಯೋಗದಿಂದ ಹೊರಡಿಸಲಾಗಿದ್ದು. ಜಿಲ್ಲೆಯ ಕೆಲವೊಂದು  ಕ್ಷೇತ್ರದಲ್ಲಿ ಮೀಸಲಾತಿಯ  ಅಧಿಸೂಚನೆಯಲ್ಲಿ ದೋಷ  ಕಂಡು ಬಂದಿದ್ದು ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ  ಚರ್ಚಿಸಲಾಗುವುದು ಎಂದು ಸಾಗರ -ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ  ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಉದಾಹರಣೆಗೆ ಶಿವಮೊಗ್ಗ ಜಿ.ಪಂ ವ್ಯಾಪ್ತಿಯ ಅರಬಿಳಚಿ ಮತ ಕ್ಷೇತ್ರದಲ್ಲಿ 3773 S.T ಮತದಾರರು ಇದ್ದಾರೆ. ಇಲ್ಲಿಗೆ ನೀಡಬೇಕಾದ ಮೀಸಲಾತಿಯನ್ನು 1421…

Read More

ಶಿವಮೊಗ್ಗ: ಒತ್ತುವರಿ ಕೆರೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ:

ಶಿವಮೊಗ್ಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು…

Read More

ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಡಿಕ್ಕಿ – ಚಾಲಕ ಸಾವು|accident

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರು ಕಾಂಪೌಂಡ್‌ಗೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಗೌತಮಪುರ ಸಂಭವಿಸಿದೆ. ಮೃತನನ್ನು ಪ್ರಜ್ವಲ್‌ ಎಂದು ಗುರುತಿಸಲಾಗಿದೆ. ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಮನೆಯೊಂದರ  ಕಾಂಪೌಂಡ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಪ್ರಜ್ವಲ್‌ ಗಂಭೀರವಾಗಿ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ.  ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

ಎಬಿವಿಪಿ‌ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ : ಮುತ್ತಿಗೆ ಹಾಕಿದವರು ನಮ್ಮವರೇ ಎಂದ ಆರಗ ಜ್ಞಾನೇಂದ್ರ

ಶಿವಮೊಗ್ಗ: ನನ್ನ ನಿವಾಸದ ಮೇಲೆ ಮುತ್ತಿಗೆ ಹಾಕಿದವರು ನಮ್ಮವರೇ.ಬೆಂಗಳೂರಿನ ಮನೆಯ ಯಾವುದೇ ಗೇಟ್ ಕ್ಲೋಸ್ ಮಾಡಿರಲಿಲ್ಲ. ಹೆಚ್ಚಿನ ಭದ್ರತೆಯಿರಲಿಲ್ಲ. ಭದ್ರತಾ ಲೋಪ ಆಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು…

Read More

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್​ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.  ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.

Read More

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More