ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | Railway

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | ಶಿವಮೊಗ್ಗ : ಇಲ್ಲಿನ ರೈಲುನಿಲ್ದಾಣದಲ್ಲಿ ಭದ್ರಾವತಿ ಕಡೆಗೆ ಹೋಗುವ ಕೊನೆಯ ರೈಲ್ವೆ ಟ್ರಾಕ್ ಮೇಲೆ ಸುಮಾರು 30 ವರ್ಷದ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ.  ಕರ್ತವ್ಯದಲ್ಲಿದ್ದ ಕೀ ಮ್ಯಾನ್ ಟ್ರ್ಯಾಕ್ ಪರಿಶೀಲನೆ ವೇಳೆಯಲ್ಲಿ ಶವ ಪತ್ತೆಯಾಗಿದೆ. ಶವವು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಗಾರದಲ್ಲಿರುತ್ತದೆ. ಮೃತ ವ್ಯಕ್ತಿಯ ಚಹರೆ ಸುಮಾರು 5.8 ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ…

Read More

ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು…

Read More

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…

Read More

ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ

ತೀರ್ಥಹಳ್ಳಿ: ಮಲೆನಾಡಿನ ಸುಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರುವ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಜನವರಿ 2,3,4 ರಂದು ನಡೆಯಲಿದ್ದು  ಈ ಬಾರಿ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆಜಾತ್ರೆಯನ್ನು ಸಂಭ್ರಮ ಹಾಗೂ ವೈಭವಯುತವಾಗಿ ಆಚರಿಸುವುದಾಗಿ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಂದಾಜು 12 ಲಕ್ಷ ರೂ ಮೊತ್ತದ ಬಜೆಟ್ ನೊಂದಿಗೆ  3 ದಿನಗಳ ಕಾಲ ನೆಡೆಯಲಿರುವ ಅದ್ದೂರಿ ಜಾತ್ರೆಗೆ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದ್ದಾರೆ.

Read More

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ Hosanagara Police have appealed to the public to help trace 28-year-old Tasinulla, who has been missing since July 25 from Church Road, Hosanagara in Shivamogga district. ಶಿವಮೊಗ್ಗ, ಜು. 29: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಅವರು ಕಳೆದ ಜುಲೈ 25ರಿಂದ ನಾಪತ್ತೆಯಾಗಿದ್ದಾರೆ ಎಂದು…

Read More

ಆಷಾಡ ಮಾಸದ ನಂತರ ಕುಮಾರಸ್ವಾಮಿ ರಂಗಪ್ರವೇಶ: ಸಿದ್ದವಾಗಿದೆ 150 ವಿಧಾನಸಭಾ ಕ್ಷೇತ್ರದ ನೀಲನಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಆಷಾಢ ಮಾಸ ಕಳೆಯುತ್ತಿದ್ದಂತೆ “ರಂಗಪ್ರವೇಶ’ಕ್ಕೆ ನೀಲನಕ್ಷೆ ರೂಪಿಸುತ್ತಿದ್ದಾರೆ. ಕಳೆದ ಎರಡು ವಿಧಾನಸಭೆ ಚುನಾವಣೆಯ ಅನುಭವದ ಆಧಾರದ ಮೇಲೆ 2023ರಲ್ಲಿ 150 ಕ್ಷೇತ್ರಗಳ ಗುರಿಯೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ತಮಗೆ ಜನಪ್ರಿಯತೆ ತಂದುಕೊಟ್ಟ “ಗ್ರಾಮವಾಸ್ತವ್ಯ’ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಹಳೇ ಮೈಸೂರು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಕ್ಷೇತ್ರಗಳನ್ನು ಪಟ್ಟಿ ಮಾಡಿಕೊಂಡಿದ್ದು, ಪ್ರವಾಸದ ಅನಂತರ…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಸಿದ್ದರಾಗಬೇಕು – ಹರತಾಳು ಹಾಲಪ್ಪ|GJC

ರಿಪ್ಪನ್‌ಪೇಟೆ :  ಶ್ರೀಮಂತರ ಮತ್ತು ಸರ್ಕಾರಿ ನೌಕರರ ಅಧಿಕಾರಿಗಳ ಮಕ್ಕಳ ಮುಂದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸ್ಪರ್ಧಾತ್ಮಕ ಪೈಪೋಟಿ ನಡೆಸಬೇಕಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರೊಂದಿಗೆ ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಶುಕ್ರವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ, ತಂದೆ-ತಾಯಿಯರ ಪೋಷಕರ ಮಾರ್ಗದರ್ಶನದೊಂದಿಗೆ ಶಿಸ್ತುಬದ್ದ ಬದುಕಿಗೆ ಸರಿಯಾದ ಮಾರ್ಗದರ್ಶನ ಕೊಡಿಸಬೇಕು. ಇಲ್ಲದಿದ್ದರೆ ಭಾರಿ ಸಂಕಷ್ಟ…

Read More

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….

Read More

ಸ್ವರ್ಣ ಗೌರಿ ಹಬ್ಬದ ಸಂಭ್ರಮ

ಸ್ವರ್ಣ ಗೌರಿ ಹಬ್ಬದ ಸಂಭ್ರಮ ಇಂದು ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ನಡೆಯುತ್ತಿದೆ.  ಅದರಂತೆ ಇಂದು ಗೌರಿಯನ್ನು ದೇವಾಲಯಗಳಲ್ಲಿ, ಮನೆ-ಮನೆಗಳಲ್ಲಿ ಪ್ರತಿಷ್ಟಾಪಿಸಿ, ಅತ್ಯಂತ ಸಡಗರ ಸಂಭ್ರಮದಿಂದ ಪೂಜಿಸಲಾಗುತ್ತಿದೆ.  ಮಹಿಳೆಯರು, ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲಾ ಇಂದು ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.  ರಿಪ್ಪನ್ ಪೇಟೆ ಬ್ರಾಹ್ಮಣ ಸಂಘದ ಶ್ರೀರಾಮ ಸಭಾಭವನದಲ್ಲಿ ಕೊಡೂರು ವಿಜಯೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀ ಸ್ವರ್ಣ ಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪದ್ಮ ಸುರೇಶ್ , ಅಮಿತಾ ಬಲ್ಲಾಳ್ , ಸೌಮ್ಯ…

Read More

ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!!|crime news

ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!! ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅದ್ದೂರಿ ಜಾತ್ರೆ ನಡೆಯುತ್ತಿದೆ. ನೂರಾರು ಕಡೆಗಳಿಂದ ಈ ಜಾತ್ರೆಗೆ ಸಾವಿರಾರು ಮಂದಿ ಬಂದಿದ್ದಾರೆ. ಆದರೆ ಜಾತ್ರೆಯಲ್ಲಿ ಇಸ್ಪೀಟ್ ಅಂದರ್ ಬಾಹರ್ ಶುರುವಾಗಿದ್ದು ಜನರನ್ನು ಆಡಿಸುವ ಮೂಲಕ ಅಲ್ಪ ಸ್ವಲ್ಪ ಹಣವನ್ನು ಖಾಲಿ ಮಾಡಿಸಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಬೆಜ್ಜವಳ್ಳಿ ಜಾತ್ರೆಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟ್ ಆಟವನ್ನು ಬಹಿರಂಗವಾಗಿಯೇ ಆಡಿಸಿದ್ದಾರೆ. ದೇವಸ್ಥಾನದ…

Read More