Headlines

Shivamogga: ನಿಂತಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಡಿಕ್ಕಿ – ಚಾಲಕ ಗಂಭೀರ

ಶಿವಮೊಗ್ಗ: ಟಿಪ್ಪರ್ ಲಾರಿಗೆ ಆಂಬುಲೆನ್ಸ್‌ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್‌ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ ಮಲವಗೊಪ್ಪ ಸಮೀಪದಲ್ಲಿ ನಡೆದಿದೆ. ನಿಲ್ಲಿಸಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಗೆ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್ ನಜ್ಜುಗುಜ್ಜಾಗಿದೆ.ಭದ್ರಾವತಿ ಕಡೆಯಿಂದ ಬರುತ್ತಿದ್ದ ಆಂಬುಲೆನ್ಸ್‌  ಮಲವಗೊಪ್ಪದ  ಬಳಿಯಲ್ಲಿ ನಿಂತಿದ್ದ ಟಿಪ್ಪರ್‌ ಲಾರಿಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು,ಆತನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.

Read More

ಹುಂಚ : ಬೈಕ್‌ ನಿಲ್ಲಿಸಿ ಕೆರೆಗೆ ಹಾರಿದ ಯುವಕ – ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಕಾರ್ಯಾಚರಣೆ – ಶವ ಪತ್ತೆ|Crime news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯ ಬಳಿ ಯುವಕನೊಬ್ಬ ಬೈಕ್ ನಿಲ್ಲಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹುಂಚ ಸಮೀಪದ ಮುತ್ತಿನಕೆರೆ ಬಳಿ ಯುವಕನೊಬ್ಬ ತನ್ನ ಬೈಕ್ ಹಾಗೂ ಪಾದರಕ್ಷೆಗಳನ್ನು ಬಿಟ್ಟು ಕೆರೆಗೆ ಹಾರಿದ ಘಟನೆ ನಡೆದಿತ್ತು ಬೆಳಿಗ್ಗೆ ಬೈಕ್ ಹಾಗೂ ಪಾದರಕ್ಷೆಗಳನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೆರೆಯಲ್ಲಿ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಹಚ್ಚಿದ್ದಾರೆ. ಮೃತ…

Read More

RIPPONPET|ಖಾಸಗಿ ಬಸ್ ಹಾಗೂ ಓಮಿನಿ‌ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮದಲ್ಲಿ ಖಾಸಗಿ ಬಸ್ಸು ಹಾಗೂ‌ ಒಮಿನಿ ಕಾರಿನ ನಡುವೆ ಅಪಘಾತವಾದ ಘಟನೆ ನಡೆದಿದೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಮಾರುತಿ‌ ಒಮಿನಿ‌ಕಾರಿನ ನಡುವೆ ಅರಸಾಳು ಕೆರೆ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಚಾಲಕನೊಬ್ಬನೆ ಇದ್ದು ಆತನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಂತೆಗಳಲ್ಲಿ ಮಂಡಕ್ಕಿ ವ್ಯಾಪಾರ ನಡೆಸುತಿದ್ದ ಗರ್ತಿಕೆರೆ ಮೂಲದ ವ್ಯಕ್ತಿ ಶಿವಮೊಗ್ಗದಿಂದ ಗರ್ತಿಕೆರೆಗೆ ತೆರಳುವಾಗ ಈ ಘಟನೆ ನಡೆದಿದೆ…

Read More

ಅಕ್ರಮ ಗೋ ಸಾಗಾಟ – ವಾಹನ ಸಮೇತ ಹಸುಗಳನ್ನು ಪೊಲೀಸ್ ವಶಕ್ಕೆ ನೀಡಿದ ಸ್ಥಳೀಯರು | crime news

ಅಕ್ರಮ ಗೋ ಸಾಗಾಟ – ವಾಹನ ಸಮೇತ ಪೊಲೀಸ್ ವಶಕ್ಕೆ! ತೀರ್ಥಹಳ್ಳಿ : ಯಾವುದೇ ದಾಖಲೆ ಇಲ್ಲದೆ ಟಾಟಾ ಲೈಲ್ಯಾಂಡ್ ವಾಹನದಲ್ಲಿ 3 ಹಸುಗಳನ್ನು ತುಂಬಿಕೊಂಡು ಹೋಗುತ್ತಿದ್ದಾಗ ಕುರುವಳ್ಳಿಯಲ್ಲಿ ಸ್ಥಳೀಯರು ಹಿಡಿದು ವಾಹನ ಸಮೇತ ಹಸುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಂಠಿಕಟ್ಟೆಯಿಂದ – ಭದ್ರಾವತಿಗೆ ಹಸುವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು ಯಾವುದೇ ದಾಖಲಾತಿ ಇರದ ಕಾರಣ ವಶಕ್ಕೆ ಪಡೆಯಲಾಗಿದೆ. ಯಾವ ಕಾರಣಕ್ಕೆ ಹಸು ಸಾಗಿಸಲಾಗುತ್ತಿತ್ತು ಎಂಬುದು ತಿಳಿದು ಬಂದಿಲ್ಲ. ದಾಖಲೆ ಇಲ್ಲದ ಕಾರಣ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು ತೀರ್ಥಹಳ್ಳಿ…

Read More

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!?

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!? ಹೊಸನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊಪ್ಪರಗುಂಡಿ ಸೇತುವೆ ಬಳಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು , ಎಂ ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ , ಕೋಡುರು ಸಮೀಪದಲ್ಲಿ ಮುಖ್ಯ…

Read More

ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|

ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…

Read More

ರಿಪ್ಪನ್‌ಪೇಟೆ – ಓಮಿನಿ ಕಾರಿಗೆ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅಪ್ಪಳಿಸಿದ ಎರ್ಟಿಗಾ ಕಾರು – ಸರಣಿ ಅಪಘಾತ|accident

ಓಮಿನಿ ಕಾರಿಗೆ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅಪ್ಪಳಿಸಿದ ಕಾರು ರಿಪ್ಪನ್‌ಪೇಟೆ ; ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ರಿಪ್ಪನ್‌ಪೇಟೆ – ಹೊಸನಗರ ರಾಜ್ಯ ಹೆದ್ದಾರಿ ಕೋಡೂರಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆ ಚಲಿಸುತ್ತಿದ್ದ ಮಾರುತಿ ಎರ್ಟಿಗಾ ಕಾರು (KA15 N 8342) ದಿಢೀರನೆ ರಸ್ತೆಗೆ ಅಡ್ಡ ಬಂದ ಮಾರುತಿ ಓಮ್ನಿ ವಾಹನಕ್ಕೆ ಗುದ್ದಿದ ಪರಿಣಾಮ ಎರ್ಟಿಗಾ ಕಾರಿನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ…

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಜಮೀನು ವ್ಯಾಜ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ನಡೆದಿದೆ. ಮಳಲಿಕೊಪ್ಪದ ನಾಗೇಶ್ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆಗೆ ಸಂಬಂದಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಳಲಿಕೊಪ್ಪದ ಯೋಗೇಂದ್ರಪ್ಪ ಹಾಗೂ ಸರಸ್ವತಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನಲೆ…

Read More