Headlines

ಕನ್ನಡದ ಪ್ರಖ್ಯಾತ ನಟ,ನಿರ್ದೇಶಕ ರಿಷಬ್ ಶೆಟ್ಟಿ ರವರ ನೂತನ ಚಲನಚಿತ್ರಕ್ಕೆ ನಾಳೆ ಶಿವಮೊಗ್ಗದಲ್ಲಿ ಆಡಿಷನ್ :

ಶಿವಮೊಗ್ಗ: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರೊಡಕ್ಷನ್ಸ್ ನ ನೂತನ ಚಲನಚಿತ್ರಕ್ಕೆ ಕಲಾವಿದರ ಆಯ್ಕೆ ಮಾಡಿಕೊಳ್ಳಲು ಶಿವಮೊಗ್ಗ ನಗರದಲ್ಲಿ ಆಡಿಷನ್ ನಡೆಯಲಿದೆ. ಜೂ.21ರ ಮಂಗಳವಾರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪಕ್ಕದ ಕೋಟೆ ಬಯಲು ರಂಗಮಂದಿರದಲ್ಲಿ ನಡೆಯುವುದು. 5 ರಿಂದ 10 ವರ್ಷದೊಳಗಿನ ಬಾಲ ಕಲಾವಿದರು, 20ರಿಂದ 30, 50 ರಿಂದ 65 ವರ್ಷದ ಪುರುಷರು ಪೋಷಕ ಪಾತ್ರಕ್ಕೆ ಹಾಗೂ 20 ರಿಂದ 35 ವರ್ಷದ ವಯಸ್ಸಿನ…

Read More

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಜ್ಞಾನವು ಸನ್ಮಾರ್ಗದೆಡೆಗೆ ಕೊಂಡೊಯ್ಯುವ ದಿವ್ಯಶಕ್ತಿಯಾಗಿದೆ – ಡಾ.ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ|hombuja shri

ರಿಪ್ಪನ್ ಪೇಟೆ : ಜ್ಞಾನವು ಎಲ್ಲರನ್ನೂ ಸನ್ಮಾರ್ಗಕ್ಕೆ ತೆಗೆದುಕೊಂಡು ಹೋಗುವ ದಿವ್ಯಶಕ್ತಿಯಾಗಿದೆ. ಅಜ್ಞಾನದಿಂದ, ಅಂಧಕಾರದಿಂದ ಬೆಳಕಿನ ಕಡೆಗೆ ತೆಗೆದುಕೊಂಡು ಹೋಗುವ ಶಕ್ತಿ ಜ್ಞಾನದಲ್ಲಿರುತ್ತದೆ. ಜ್ಞಾನದ ಶಕ್ತಿಯು ಪ್ರತಿಯೊಬ್ಬರಲ್ಲಿಯೂ ಕೂಡ ಸಮನಾಗಿದ್ದರೂ ಅದರ ಅಭಿವೃದ್ಧಿ ಎಲ್ಲರಲ್ಲಿಯೂ ಸಮಾನಾಗಿರುವುದಿಲ್ಲ. ಎಲ್ಲಾ ಶಿಲೆಯಲ್ಲಿಯೂ ಮೂರ್ತಿಯಾಗುವ ಅರ್ಹತೆ ಇದ್ದರೂ ಶಿಲ್ಪಿ ತನ್ನ ಕೌಶಲ್ಯವನ್ನು ಎಷ್ಟರ ಮಟ್ಟಿಗೆ ಉಪಯೋಗಿಸುತ್ತಾನೆಯೂ ಅಷ್ಟರ ಮಟ್ಟಿಗೆ ಅದು ರೂಪುಗೊಳುತ್ತದೆ. ಹಾಗೆಯೇ ಮನುಷ್ಯನು ತನ್ನಲ್ಲಿರುವ ಜ್ಞಾನದ ಶಕ್ತಿಯನ್ನು ರೂಪುಗೊಳಿಸಿಕೊಳ್ಳಬೇಕು ಎಂದು ಹೊಂಬುಜ ಜೈನ ಮಠದ  ಡಾ. ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ…

Read More

ರಾಷ್ಟ್ರ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ|volleyball

ರಿಪ್ಪನ್ ಪೇಟೆ : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ (16ವರ್ಷದೊಳಗಿನ ವಯೋಮಿತಿ ) ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More

ಶಿವಮೊಗ್ಗದ ಟಿಪ್ಪುನಗರದಲ್ಲಿ ಕೋಟಿ ರೂ ಮೌಲ್ಯದ ಶ್ರೀಗಂಧ ಪತ್ತೆ : ಆರೋಪಿ ಸೈಯದ್ ಅಪ್ಸರ್ ವಶಕ್ಕೆ

ಶಿವಮೊಗ್ಗದ ಟಿಪ್ಪುನಗರದಲ್ಲಿ ನಿನ್ನೆ ಸುಮಾರು ಒಂದು ಸಾವಿರ ಕೆಜಿ ತೂಕದ, ಅಂದಾಜು ಕೋಟಿ ರೂ ಬೆಲೆಬಾಳುವ ಭಾರೀ ಶ್ರೀಗಂಧವನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡಿದೆ. ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಡಿಸಿಎಫ್ ಶಂಕರ್ ಹಾಗೂ ಇತರೆ ಅಧಿಕಾರಿಗಳು,, ಪೊಲೀಸ್ ಇಲಾಖೆಯ ಪ್ಸ್ಪ ಪ್ರಬಾರ ಡಿವೈಎಸ್ ಪಿ, ತುಂಗಾನಗರ ಇನ್ಸ್ ಸ್ಪೆಕ್ಟರ್ ದೀಪಕ್ ಅವರ ತಂಡ ಕೈ ಜೋಡಿಸಿ ದಾಳಿ ನಡೆಸಿದಾಗ ಈ ಶ್ರೀಗಂಧ ಪತ್ತೆಯಾಗಿದೆ. ಟಿಪ್ಪುನಗರ ಸರಹದ್ದಿನ ಅಂಬೇಡ್ಕರ್…

Read More

ರಿಪ್ಪನ್‌ಪೇಟೆ : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರಿಗೆ ಹಿಂದೂಪರ ಸಂಘಟನೆಗಳಿಂದ ಶ್ರದ್ದಾಂಜಲಿ

ರಿಪ್ಪನ್ ಪೇಟೆ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾ ಧುರೀಣ ಪ್ರವೀಣ್‌ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ರಿಪ್ಪನ್‌ಪೇಟೆಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು. ಪಟ್ಟಣದಲ್ಲಿ ಇಂದು ಹಿಂದೂಪರ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಮೊಂಬತ್ತಿ ಹಚ್ಚಿ,2ನಿಮಿಷ ಮೌನಾಚರಣೆ ನಡೆಸಿ ಬಳಿಕ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮುಖಂಡರಾದ ಆರ್…

Read More

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ

ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….

Read More