Headlines

ವಿಷ ಕುಡಿಯುತ್ತೇವೆ ಹೊರತು ಹಿಜಬ್ ತೆಗೆಯುವುದಿಲ್ಲ : ಕಾಲೇಜನ್ನು ಬಹಿಷ್ಕರಿಸಿ ಹೊರನಡೆದ 25 ಪಿಯು ವಿದ್ಯಾರ್ಥಿನಿಯರು

ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು  ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ. ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ. ಹಿಜಬ್…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

ರಿಪ್ಪನ್‌ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಬಂಧಿತ ಅರೋಪಿಗಳು ಆನಂದಪುರದ ದಾಸನಕೊಪ್ಪ ವಾಸಿ ಸಂದೀಪ (30) ಹಾಗೂ ಟ್ರ್ಯಾಕ್ಟರ್‌ ಚಾಲಕ ಹಾವೇರಿ ಜಿಲ್ಲೆಯ ಗುಡ್ಡಪ್ಪ (28) ಎನ್ನಲಾಗಿದೆ.  ಶನಿವಾರದಂದು ಸಾಗರ ರಸ್ತೆಯ ವಡಗೆರೆಯ ವೆಂಕಪ್ಪ ಶೆಟ್ಟಿ ಅವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.  ಈ ಪ್ರಕರಣದ ಪ್ರಮುಖ ಆರೋಪಿ ವಡಗೆರೆ –ಚಂದಾಳದಿಂಬದ ವಾಸಿ ಪ್ರತಾಪ್‌ಸಿಂಗ್‌ ಮಂಗಳವಾರ…

Read More

ಹೋಂ ಗಾರ್ಡ್ ಮೇಲೆ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಜಿಲ್ಲಾ ಆದಿವಾಸಿ ಸಂಘ ಆಗ್ರಹ

ಹೋಂ ಗಾರ್ಡ್ ಮೇಲಿನ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಆಗ್ರಹ ಮೇಲಾಧಿಕಾರಿ ಮೇಲೆ ಎಫ್ಐಆರ್ ಹಾಕಲು ವೀಡಿಯೋ ಸಾಕ್ಷ್ಯ ಬೇಕಂತೆ!? ಪೊಲೀಸರ ನಿರ್ಲಕ್ಷ್ಯಕ್ಕೆ ಆಕ್ರೋಶ ! Allegation of physical assault on a Home Guard from the ST community by Shivamogga District Home Guards Commandant. Tribal Welfare Association demands legal action and justice. ಶಿವಮೊಗ್ಗ: ಕರ್ತವ್ಯ ನಿರ್ವಹಿಸುತ್ತಿದ್ದ ಆದಿವಾಸಿ ಹಸಲರು (ಎಸ್‌ಟಿ) ಸಮುದಾಯಕ್ಕೆ ಸೇರಿದ ಹೋಂ…

Read More

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಯಾವೊಬ್ಬ ರೈತ ನನ್ನೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಎರಡು ಹೊತ್ತಿನ ಗಂಜಿಗೆ ದಾರಿಮಾಡಿಕೊಂಡಿರುವ ರೈತರು ಹೆದರುವ ಅವಶ್ಯಕತೆ ಇಲ್ಲ. ಆದರೆ ಹೊಸದಾಗಿ ಅರಣ್ಯವನ್ನು ಕಡಿಯಬೇಡಿ ಎಂದಷ್ಟೇ ನನ್ನ ಮನವಿ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ…

Read More

SSLC RESULT | ಆಯನೂರಿನ  ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ

SSLC RESULT | ಆಯನೂರಿನ  ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ Vatsalya International School in Ayanur, Shivamogga records 100% SSLC results for 2025-26, with 34 students passing and top scores led by Deekshit G. ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಈ ಸಾಧನೆ ಶಿಕ್ಷಣ…

Read More

ಶಿವಮೊಗ್ಗ ಸಮೀಪದ ಸಕ್ರೆಬೈಲಿನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು :

ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ವೇಗವಿದ್ದ ಕಾರಣ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ. ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ

Read More

ಹೊಸನಗರ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 64.75 ಲೀ ಮದ್ಯ ವಶ – ಓರ್ವನ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರದ ಸುರೇಶ್ ಶೆಟ್ಟಿ ಎಂಬಾತನ ಮನೆಯ ಮೇಲೆ ಹೊಸನಗರ ಅಬಕಾರಿ ಇಲಾಖೆಯವರು ಖಚಿತ ಅಧಾರದ ಮೇಲೆ ದಾಳಿ ನಡೆಸಿ ಸುಮಾರು 64.75 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ರಮ ಮದ್ಯದ ಬೆಲೆಯು 28,134 ರೂ.ಗಳಾಗಿದ್ದು ಸುರೇಶ್‌ಶೆಟ್ಟಿಯ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

24 ಗಂಟೆಯಲ್ಲಿ ಕಿಡ್ನಾಪ್ ಪ್ರಕರಣ ಬೇಧಿಸಿದ ಪೊಲೀಸರು : ಭದ್ರಾವತಿಯಲ್ಲಿ ಅಪಹರಣ – ಸಾಗರದಲ್ಲಿ ಆರೋಪಿಗಳು|crime news

ಅಪ್ರಾಪ್ತ ಬಾಲಕನನ್ನ ಅಪಹರಿಸಿ ಹಣದ ಬೇಡಿಕೆ ಇಟ್ಟ ಪ್ರಕರಣವನ್ನ 24 ಗಂಟೆಯಲ್ಲಿ ಬೇಧಿಸಿದ ಭದ್ರಾವತಿ ನ್ಯೂ ಟೌನ್ ಪೊಲೀಸರು ಐವರು ಆರೋಪಿಯನ್ನ ಬಂಧಿಸಿದ್ದಾರೆ. ಓರ್ವನ ಬಂಧನಕ್ಕಾಗಿ ಭರ್ಜರಿ ಬಲೆಯನ್ನೇ ಹೆಣೆದಿದ್ದಾರೆ. ಘಟನೆಯ ಹಿನ್ನಲೆ: ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿಯಿರುವ ಎಲ್ಐಸಿ ಕಚೇರಿ ಬಳಿ ಎಳನೀರು ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಬಳಿ ಬಂದ ಅಪರಿಚತನೋರ್ವ ನನ್ನ ಬಳಿ ಹಣ ಖಾಲಿಯಾಗಿದೆ. ಫೋನ್ ಪೇ ನೂ ಇಲ್ಲ. ನಾಲ್ಕು ಎಳನೀರು ಕೊಚ್ಚಿಕೊಂಡು 100 ಮೀಟರ್ ದೂರದಲ್ಲಿರುವ ವ್ಯಾನ್ ನಲ್ಲಿರುವ ಸ್ನೇಹಿತನ…

Read More