Headlines

ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ !!!

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.  ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ…

Read More

ನಿಟ್ಟೂರು ಸಮೀಪದ ಹೊಳೆಯಲ್ಲಿ ಪುರುಷನ ಶವ ಪತ್ತೆ :

ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟುಕ ಗ್ರಾಮದ ಸೇತುವೆ ಬಳಿ ಪುರುಷನೊಬ್ಬನ ಶವ ಪತ್ತೆಯಾಗಿದೆ. ನಿಟ್ಟೂರು ಸಮೀಪದ ಮರಕುಟುಕ ಸೇತುವೆ ಬಳಿಯ ಹೊಳೆಯಲ್ಲಿ ಪುರುಷನೊಬ್ಬನ ಶವ ಗಿಡಗಂಟಿಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯವರು ಎಂದು ಶಂಕಿಸಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ತೆರಳಿದ್ದು ತನಿಖೆ ಕೈಗೊಂಡಿದ್ದಾರೆ.

Read More

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More

ಮುರುಘಾ ಶ್ರೀ ಪ್ರಕರಣ : ಎರಡನೇ ಆರೋಪಿ ರಶ್ಮಿ ಶಿವಮೊಗ್ಗದ ಜೈಲಿಗೆ – 13 ದಿನ ನ್ಯಾಯಾಂಗ ಬಂಧನ

 ಶಿವಮೊಗ್ಗ : ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ವಾರ್ಡನ್​ ರಶ್ಮಿಯನ್ನು ಪೊಲೀಸರು ಶಿವಮೊಗ್ಗ ಸೆಂಟ್ರಲ್​ ಜೈಲ್​ಗೆ ಕರೆತಂದಿದ್ದಾರೆ. ಚಿತ್ರದುರ್ಗದಲ್ಲಿ ಮಹಿಳಾ ಸೆಲ್ ಇಲ್ಲದ ಕಾರಣಕ್ಕಾಗಿ ಆಕೆಯನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದಾರೆ. ಕೋವಿಡ್‌ ಬಂದ ನಂತರ ಚಿತ್ರದುರ್ಗ ಜೈಲಿನಲ್ಲಿದ್ದ ಮಹಿಳಾ ಸೆಲ್‌ನ್ನು ರದ್ದುಪಡಿಸಲಾಗಿದೆ.ಹೀಗಾಗಿ ರಶ್ಮಿಯನ್ನು ಶಿವಮೊಗ್ಗದ ಜೈಲಿಗೆ ವರ್ಗಾವಣೆ ಮಾಡಲಾಗಿದೆ ಶುಕ್ರವಾರ ರಾತ್ರಿ 9.30 ಕ್ಕೆ ರಶ್ಮಿಯನ್ನು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ರಶ್ಮಿಯನ್ನು ಕಳೆದ ಗುರುವಾರ ಡಿವೈಎಸ್​ಪಿ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್​​ (Micro Finance) ಕಿರುಕುಳ ನಿಲ್ಲುತ್ತಿಲ್ಲ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ (loan) ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್​​ ದಾಖಲಾಗಿದೆ….

Read More

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…

Read More

ರಿಪ್ಪನ್‌ಪೇಟೆ : ತೋಟದಲ್ಲಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ವೃದ್ದೆ ಸಾವು|snake bite

ಮನೆ ಹಿಂಬಾಗದ ಅಡಿಕೆ ತೋಟದಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಸಮೀಪದ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಮ್ಮ (72 )ಹಾವು ಕಡಿತದಿಂದ ಮೃತಪಟ್ಟ ಮಹಿಳೆಯಾಗಿದ್ದು, ಜಾನುವಾರುಗಳಿಗೆ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಶನಿವಾರ ಮಧ್ಯಾಹ್ನ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿದೆ. ಕೂಡಲೇ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮಹಿಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ…

Read More

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ ರಿಪ್ಪನ್‌ಪೇಟೆ : ಇಲ್ಲಿನ ಗವಟೂರಿನಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತವಾಗಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲು ಮುರಿತವಾದ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಹಳಿಯೂರು ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಸ್ಕೂಟಿಗೆ ಡಿಕ್ಕಿಯಾಗಿದೆ. ಬೈಕ್ ನಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಮತ್ತು ಲಕ್ಷ್ಮಿ ದಂಪತಿಗಳು ಪ್ರಯಾಣಿಸುತಿದ್ದು ಘಟನೆಯಲ್ಲಿ ಲಕ್ಷಿ ರವರ ಬಲಗಾಲು…

Read More

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ. ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ. ಇಬ್ಬರು…

Read More
Exit mobile version