Headlines

ರಿಪ್ಪನ್ ಪೇಟೆ: ಶಾಸಕ ಹರತಾಳು ಹಾಲಪ್ಪರವರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಸಮಾಜದವರಿಂದ ಒತ್ತಾಯ:

 ರಿಪ್ಪನ್‌ಪೇಟೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಾಜಿ ಸಚಿವ, ಎಂಎಸ್ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಹರತಾಳು ಹಾಲಪ್ಪನವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ರಿಪ್ಪನ್‌ಪೇಟೆ ವೀರಶೈವಲಿಂಗಾಯತ ಸಮಾಜದ ಮುಖಂಡರುಗಳಾದ ಮೆಣಸೆ ಆನಂದ,ಕಮದೂರು ರಾಜಶೇಖರ್, ಹೆಚ್.ಎಸ್.ರವಿ ಹಾಲುಗುಡ್ಡೆ, ನೆವಟೂರು ದೇವೇಂದ್ರಪ್ಪಗೌಡ, ಯೋಗೇಂದ್ರಗೌಡ, ಜಿ.ಡಿ ಮಲ್ಲಿಕಾರ್ಜುನ, ಕಳಸೆ ಗಂಗಾಧರಗೌಡ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರುಗಳು ಹಾಲಪ್ಪನವರು ಹೊಸನಗರ-ಸಾಗರ-ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಸಚಿವರಾಗಿ ಕಾರ್ಯನಿರ್ವಹಿಸಿದ್ದು ಅಲ್ಲದೆ ಶಾಸಕರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು ಜಾತಿ ಭೇದ ಭಾವ…

Read More

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್ ಕಳೆದ ತಿಂಗಳು ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟವಾಗಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್…

Read More

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡಿಗರನ್ನು ಗುರುತಿಸಿ ಶ್ರೀಗಂಧ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2025 ರಲ್ಲಿ ಈ ಗೌರವವನ್ನು ಯಕ್ಷಗಾನ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನ…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ|eid milad

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಆರ್‌.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು…

Read More

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ಶಿವಮೊಗ್ಗ: ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್‌ಗೆ ಅಭಿಮಾನಿ ಎಂದು ನಂಬಿಸಿ, ಶಿಕ್ಷಕರೊಬ್ಬರನ್ನು ದರೋಡೆ ಮಾಡಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಕೃತ್ಯ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ನಿಯಮಿತವಾಗಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ರೀಲ್ಸ್‌ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ, ಮೆಸೇಜ್ ಮೂಲಕ ಶಿಕ್ಷಕರನ್ನು ಸಂಪರ್ಕಿಸಿದ್ದ. ಬಳಿಕ ಅವರನ್ನು ಭೇಟಿಯಾಗಬೇಕೆಂದು ಕೋರಿದ್ದ…

Read More

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ : ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಲಾರಿ ಡಿವೈಡರ್ ಗೆ ಡಿಕ್ಕಿ ಒಡೆದಿದೆ. ಲಾರಿಯ‌ ಮುಂಭಾಗ ನುಜ್ಜುಗುಜ್ಜಾಗಿದೆ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಮತ್ತು ಆಯನೂರು ಕಡೆ ಹೊರಟಿದ್ದ ಲಾರಿ ಎರಡೂ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಕಾರು ಲಾರಿಯನ್ನ ಓವರ್ ಟೇಕ್ ಮಾಡುವ ವೇಳೆಯಲ್ಲಿ ಲಾರಿಗಳ ಚಾಲಕರಿಗೆ ಲಾರಿ ಚಾಲನೆಯ ನಿಯಂತ್ರಣ ತಪ್ಪಿದೆ. ಎರಡು ಲಾರಿ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal

ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ.  ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…

Read More

ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident

ಏಕಾಏಕಿ ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident ರಿಪ್ಪನ್‌ಪೇಟೆ : ಕಾಡು ಪ್ರಾಣಿ ಅಡ್ಡ ಬಂದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಜಿಪ್ಸಿ  ಜೀಪ್ ಮರಕ್ಕೆ ಡಿಕ್ಕಿಯಾಗಿ ಪಟ್ಟಣದ ಪ್ರಭೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದ ನಿವಾಸಿ ಪ್ರಬೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಪ್ರಭೀನ್ ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ…

Read More