Headlines

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ. ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ | accident

ತೀರ್ಥಹಳ್ಳಿಯಲ್ಲಿ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ- ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿ ಸಮೇತ ಕಂಬ ರಸ್ತೆ ಮೇಲೆ ಬಿದ್ದಿದ್ದು, ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಸ್ಕಾಂ…

Read More

ಕೊಡಚಾದ್ರಿ ತಪ್ಪಲಿನಲ್ಲೊಬ್ಬ ಭ್ರಷ್ಟ ಪಿಡಿಒ : ಹಣ ಕೊಟ್ಟರೆ ಗ್ರಾಮ ಪಂಚಾಯತ್ ಕೂಡ ಮಾರಾಟ ಮಾಡುವಂತಹ ಭಂಡ ಪಿಡಿಒ

ಹೊಸನಗರ ತಾಲ್ಲೂಕಿನಲ್ಲಿ ಭೂ ಅಕ್ರಮ ಒತ್ತುವರಿದಾರರ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳೇ ಭೂ ಅಕ್ರಮ ಕಬಳಿಕೆಗೆ ಸಾಥ್ ನೀಡುತ್ತಾ ಸಾರ್ವಜನಿಕರಿಗೆ, ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ವಿಪರ್ಯಾಸದ ಸಂಗತಿ. ಇತ್ತೀಚೆಗೆ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಹಣದಾಸೆಗೆ ಬಿದ್ದು, ಬದುಕಿದ್ದವರೇ ಸತ್ತಿದ್ದಾರೆಂದು ವರದಿ ನೀಡಿ ಯಾರದ್ದೋ ಆಸ್ತಿಯನ್ನು ಮತ್ಯಾರಿಗೋ ಬರೆದುಕೊಟ್ಟಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಈ ಅಕ್ರಮವನ್ನೂ ಕೂಡಾ ಅದೇ ಪಿಡಿಓ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 15 ಲಕ್ಷದವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ :

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರವರ್ಗ-3 ರಡಿ 2(ಎ) ಯಿಂದ (ಎಫ್) ವರೆಗೆ ಬರುವ ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿ ಮರಾಠ, ಕುಳವಾಡಿ ಜನರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜೀಬಾವು-ಜಲ ಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ…

Read More

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.  ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್‌ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸ್ಕೂಟಿ ಹಾಗೂ ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್‌…

Read More

ಸಾಗರ ಗ್ರಾಮಾಂತರ ಪೋಲೀಸರ ಭರ್ಜರಿ ಕಾರ್ಯಾಚರಣೆ : ಮನೆಗಳ್ಳತನ ಆರೋಪಿ ಮಾಲು ಸಮೇತ ವಶ

  ಸಾಗರ : ಪಟ್ಟಣದ ಸಮೀಪದ ಆವಿನಹಳ್ಳಿ ಬಸ್ ನಿಲ್ದಾಣದ ಬಳಿ 30 ವರ್ಷದ ವ್ಯಕ್ತಿಯನ್ನು ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಸಾಗರ ಗ್ರಾಮಾಂತರ ವ್ಯಾಪ್ತಿಯ ಮನೆಗಳಲ್ಲಿ ಕಳ್ಳತನ ಮಾಡಿದ್ದು ಗೊತ್ತಾಗಿದೆ. ಈ ವೇಳೆ ಆತನಿಂದ ಬಂಗಾರದ ಬಂಗಾರದ ಆಭರಣ,ಬೆಳ್ಳಿ,ನಗದು ಹಣ ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.ಆರೋಪಿಯಿಂದ ಒಟ್ಟು 4.71.660 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲಾ.ಎಸ್.ಪಿ ಲಕ್ಷ್ಮಿ ಪ್ರಸಾದ್ ಮತ್ತು ಹೆಚ್ಚುವರಿ…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More

ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಪ್ರೀತಿಯಿಂದ ಹರಿದು ಬಂದ ಅಭಿಮಾನಿಗಳ ಜನಸಾಗರ|nomination

ಸಾಗರ : ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಮೊದಲು ಸಾಗರದ ಗಣಪತಿ ದೇವಸ್ಥಾನದಲ್ಲಿ ದಂಪತಿ ಸಮೇತ ಪೂಜೆ ಸಲ್ಲಿಸಿ ಕಾಂಗ್ರೆಸ್ ಕಚೇರಿ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳಿಗೆ ಮಾತನಾಡಿದ, ಗೋಪಾಲಕೃಷ್ಣ ಬೇಳೂರು, ಇವತ್ತು ಒಳ್ಳೆಯ ದಿನ ಎಂದು ನಾಮಪತ್ರ ಸಲ್ಲಿಸಿದ್ದೆನೆ. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ. ಸರಳವಾಗಿ ನಾಮಪತ್ರ ಸಲ್ಲಿಸುವ ಉದ್ದೇಶದಿಂದ ಯಾವ ಕಾರ್ಯಕರ್ತರಿಗೂ ಕರೆ ಕೊಟ್ಟಿಲ್ಲ. ಅದರೂ,…

Read More

ಕ್ಷುಲ್ಲಕ ಕಾರಣಕ್ಕೆ ಪದವಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಕೊಪ್ಪ: ಇಲ್ಲಿನ ಪ್ರಥಮ ಧರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸುಮಾ (20)  ಸೋಮವಾರ ಬೆಳಿಗ್ಗೆ ಕುದುರೆಗುಂಡಿಯಲ್ಲಿರುವ ಮನೆಯಲ್ಲಿ ವೇಲ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮನೆಯಲ್ಲಿ ಮೃತ ಸುಮಾ ಅವರು ನೀರನ್ನು ಬಿಸಿ ಮಾಡಿ ತಂದಿಟ್ಟಿದ್ದರು. ಈ ವೇಳೆ ಅಕ್ಕನ ಏಳು ತಿಂಗಳ ಮಗುವು ಬಿಸಿ ನೀರನ್ನು ಮುಟ್ಟಿದ ಪರಿಣಾಮ ಮಗುವಿನ ಮೈಯಲ್ಲಿ ಗುಳ್ಳೆಗಳು ಬಂದಿದ್ದವು.  ತಕ್ಷಣ ಮಗುವಿನ ಪೋಷಕರು ಕೊಪ್ಪ ಸರ್ಕಾರ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದರು.  ಮಗುವಿಗೆ…

Read More