ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest
ಹೊಸನಗರ : ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…