Headlines

ಆನಂದಪುರ ಸಮೀಪದಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ಗೌತಮಪುರ ನಿವಾಸಿಗಳಾದ ಪ್ರದೀಪ್ (25) ಹಾಗೂ ದಯಾನಂದ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆನಂದಪುರದಿಂದ ಸಂತೆ ಮುಗಿಸಿಕೊಂಡು ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ  ಕಣ್ಣೂರು ಸಮೀಪ ನಿಂತಿದ್ದ ಲಾರಿಗೆ ಹಿಂಬದಿಯಿಂದಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದುಸೂಕ್ತ ಸೂಚನಾ ಫಲಕವಿಲ್ಲದೆ ಲಾರಿ ನಿಲ್ಲಿಸಿರುವುದಕ್ಕೆ ಆಕ್ರೋಶ…

Read More

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ ಶಿವಮೊಗ್ಗ: ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ಗರ್ಭಿಣಿಯಾಗಿದ್ದ ತನ್ನ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಹರೀಶ್ ಎಂಬುವವರ ವಿರುದ್ಧ ಆತನ ಪತ್ನಿ ನೀಡಿದ ದೂರಿನ ವಿಚಾರಣೆ ಪೂರ್ಣಗೊಂಡ ಬಳಿಕ, 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಅಕ್ಟೋಬರ್ 29, 2025ರಂದು ತೀರ್ಪು ನೀಡಿದೆ. ವಿವಾಹದ ಬಳಿಕ ಹರೀಶ್ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ….

Read More

ಮಲೆನಾಡಿನ ಮಳೆಯಿಂದ ಮೈದುಂಬಿದ ಜೋಗ ಜಲಪಾತ; ವಿಶ್ವವಿಖ್ಯಾತ ತಾಣದಲ್ಲಿ ಪ್ರವಾಸಿಗರ ದಂಡು

ಮಲೆನಾಡಿನ ಮಳೆಯಿಂದ ಮೈದುಂಬಿದ ಜೋಗ ಜಲಪಾತ; ವಿಶ್ವವಿಖ್ಯಾತ ತಾಣದಲ್ಲಿ ಪ್ರವಾಸಿಗರ ದಂಡು Heavy rainfall in Shivamogga’s Malnad region has revived the majestic Jog Falls. Water is gushing through Raja, Rani, Roarer and Rocket streams, attracting large numbers of tourists. ಶಿವಮೊಗ್ಗ, ಜುಲೈ 5: ಮಲೆನಾಡು ಭಾಗದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ತನ್ನ ನೈಜ ವೈಭವವನ್ನು ಮರಳಿ…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ :

ಅನಾರೋಗ್ಯದಿಂದ ಬಳಲುತ್ತಿದ್ದ ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶರಾಗಿದ್ದಾರೆ. ಭಾರ್ಗವಿ ನಾರಾಯಣ್ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ಚಲನಚಿತ್ರದ ನಟಿ ಮತ್ತು ಕರ್ನಾಟಕದ, ರಂಗಭೂಮಿಯ ಕಲಾವಿದೆ. ಭಾರ್ಗವಿ ನಾರಾಯಣ್ ಅವರ ಕೆಲವು ಪ್ರಸಿದ್ಧ ಚಿತ್ರಗಳು ನಟಿಸಿದ್ದಾರೆ. ಎರಡು ಕನಸು, ಪಲ್ಲವಿ ಅನುಪಲ್ಲವಿ, ಹಾಗೂ ಬಾ ನಲ್ಲೆ ಮಧುಚಂದ್ರಕ್ಕೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಾರ್ಗವಿ ನಾರಾಯಣ್ ಅವರು ಇಪ್ಪತ್ತು ಚಿತ್ರಗಳು ಹಾಗೂ ದೂರದರ್ಶನ ಸರಣಿಯ ಮಂಥನಾ ಮತ್ತು ಮುಕ್ತಾ (ಟಿವಿ ಸರಣಿಗಳು) ಸೇರಿದಂತೆ ಕನ್ನಡದಲ್ಲಿ ಅನೇಕ…

Read More

RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದು,ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಮೇತದೇಹವನ್ನು ಶಿವಮೊಗ್ಗದ ಮೆಗ್ಗಾನ್…

Read More

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….

Read More

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ಹೊಸನಗರದ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು|kalluhalla bridge

ಹೊಸನಗರ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು| ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.  ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು…

Read More

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು ಇಲ್ಲವೇ ಅವರನ್ನು ಸುರಕ್ಷಿತವಾಗಿ…

Read More