Headlines

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…

Read More

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ A truck carrying maize from Shikaripura to Mangaluru caught fire near Beluru village in Hosanagara taluk after an alleged engine fault. The driver escaped safely and no injuries were reported. ಹೊಸನಗರ: ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಎಂಜಿನ್‌ಗೆ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು,…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…

Read More

ಹುಲಿಕಲ್ ಘಾಟ್ ಭೀಕರ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – ಮೃತರ ಸಂಖ್ಯೆ ಮೂರಕ್ಕೆ ಏರಿಕೆ|Hulikal accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ನಂತರ ಚಂದ್ರಗಿರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಕಂಪದ ಕೈ ರವಿ ರವರ ಪತ್ನಿ ಶಾಲಿನಿ ಮೃತಪಟ್ಟಿದ್ದಾರೆ. ಘಟನೆಯ ಹಿನ್ನಲೆ: ಗುರುವಾರ ರಾತ್ರಿ ಹುಲಿಕಲ್ ಘಾಟ್ ನಲ್ಲಿ  ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ…

Read More

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ ರಿಪ್ಪನ್‌ಪೇಟೆ – ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿದ್ದ ಪ್ರಕರಣ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮ ಖಾತೆಯಲ್ಲಿ ಇದೆ  ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದರು ಈ ಹಿನ್ನಲೆಯಲ್ಲಿ ಪೊಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು….

Read More

ಕರ್ನಾಟಕ ವಿಧಾನಸಭಾ ಚುನಾವಣೆ 2023 – 224 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…!!

ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತಿದ್ದು ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುತ್ತಿವೆ.ಇದರಲ್ಲಿ ಜೆಡಿಎಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮುಂಬರುವಂತಹ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಯಾವ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗುತ್ತಿದೆ ಎನ್ನುವ ಸಂಭವನೀಯ ಪಟ್ಟಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಕಾಂಗ್ರೆಸ್ ಸಂಭವನೀಯರ ಪಟ್ಟಿ ಬೆಂಗಳೂರು ನಗರ ಗಾಂಧಿನಗರ- ದಿನೇಶ್ ಗುಂಡೂರಾವ್…

Read More

23 ಕೋಟಿ ಮೌಲ್ಯದ ಚಿನ್ನ ಸೀಜ್

ತರೀಕೆರೆಯಲ್ಲಿ ಚುನಾವಣಾ ಸಿಬ್ಬಂದಿ  ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 23 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಸೀಜ್​ ಆದ ಬಂಗಾರದ ತೂಕ 40 ಕೆ.ಜಿ.  ಚಿಕ್ಕಮಗಳೂರು ಜಿಲ್ಲೆ  ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.   ಚಿನ್ನವನ್ನು ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿತ್ತು.ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್‌ ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಸಾಗಿಸುತ್ತಿರುವುದು ಕಂಡುಬಂದಿದೆ. ಆಭರಣಗಳಿಗೆ ಪೂರಕವಾಗಿ ಯಾವುದೇ ದಾಖಲೆಗಳು ನೀಡದೇ ಹಿನ್ನೆಲೆಯಲ್ಲಿ ಅದನ್ನು ಸೀಜ್​…

Read More

ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ ನುಡಿನಮನ ಕಾರ್ಯಕ್ರಮ :

ರಿಪ್ಪನ್ ಪೇಟೆ: ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ ಡಾ.ಜಿ. ಡಿ. ನಾರಾಯಣಪ್ಪ ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ಅಮೃತ ಮತ್ತು ಅಮೃತ ಗ್ರಾಮಸ್ಥರು ಶನಿವಾರ ದಿವಂಗತ  ಜಿ. ಎಸ್.ಗಣೇಶ್ ಮೂರ್ತಿ ಪ್ರಾಚಾರ್ಯರು ಮತ್ತು ಶಿಕ್ಷಣತಜ್ಞರು ಮತ್ತು ಎಂ.ಹೆಚ್.ಪ್ರಕಾಶ್ ಪ್ರಾಚಾರ್ಯರು ರ ವರಿಗೆ  ಆಯೋಜಿಸಲಾಗಿದ್ದ  ಭಾವಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಳ್ಳಿ ಹಾಗೂ…

Read More