Headlines

ರಿಪ್ಪನ್‌ಪೇಟೆ: ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಅಪಘಾತ – ಗಾಯಾಳು ಮೆಗ್ಗಾನ್ ದಾಖಲು | ಜೀವನ್ಮರಣ ಹೋರಾಟದಲ್ಲಿದ್ದ ನರಿಗೆ ಸ್ಪಂದಿಸಿದ ಅರಣ್ಯ ಇಲಾಖೆ|Accident

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಟ್ಟಣದ ಸಮೀಪದ ವರಾನಹೊಂಡದ ಮುಖ್ಯರಸ್ತೆಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಮೂಗೂಡ್ತಿ ಕಡೆಗೆ ತೆರಳುತಿದ್ದ ಹೀರೋ ಹೊಂಡ ಸ್ಪ್ಲೆಂಡರ್ ಬೈಕ್ ಗೆ ನರಿ ಅಡ್ಡ ಬಂದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿ ಉಪನ್ಯಾಸಕ ಶ್ರೀಧರ್(50) ರವರಿಗೆ ತಲೆ ಹಾಗೂ ಕೈ ಗೆ ಗಂಭೀರ ಗಾಯಗಳಾಗಿದ್ದು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ…

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಅರಿವು ಮೂಡುತ್ತದೆ : ಶಾಸಕ ಹರತಾಳು ಹಾಲಪ್ಪ.

ಹೊಸನಗರ : ಜನಪ್ರತಿನಿಧಿಗಳಾಗಿ ಕಾರ್ಯಗಾರಗಳಲ್ಲಿ ಭಾಗವಹಿಸಿದ್ದಾಗ ಸರ್ಕಾರದ ಸವಲತ್ತುಗಳು ಹಾಗೂ ಜನಪರ  ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗುತ್ತದೆ. ಇದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೊಸನಗರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ತಾಲೂಕ್ ಬಿಜೆಪಿ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಪ್ರಕೋಷ್ಠ ವತಿಯಿಂದ ಆಯೋಜಿಸಿದ್ದ ಚುನಾಯಿತ ಗ್ರಾ.ಪಂ ಸದಸ್ಯರ ತಾಲ್ಲೂಕು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ…

Read More

Accident | ಭದ್ರಾವತಿಯ ಶಾಸಕ ಬಿ‌ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ‌ಸಾವು

Accident | ಭದ್ರಾವತಿಯ ಶಾಸಕ ಬಿ‌ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ‌ಸಾವು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಂಗ್ರೆಸ್(congress) ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಆಪ್ತ ಸಹಾಯಕರಾದ ಈಶ್ವರ್ ರಸ್ತೆ ಅಪಘಾತದಲ್ಲಿ (accident) ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ. ಶಾಸಕರ ಆಪ್ತ ಸಹಾಯಕ ಈಶ್ವರ್ ಕೂಡ್ಲಿಗೆರೆಯಿಂದ ಭದ್ರಾವತಿಗೆ(bhadravathi) ಬೈಕ್ ನಲ್ಲಿ ಬರುತ್ತಿರುವಾಗ ಲಾರಿ ಡಿಕ್ಕಿಯಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳು ಈಶ್ವರ್ ರವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.ಮೃತ ದೇಹವನ್ನು ಭದ್ರಾವತಿಯ…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident

ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…

Read More

ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ|crime news

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ  ತೀರ್ಥಹಳ್ಳಿ: ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತ್ತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದ ರಮೇಶ್ ನೇಣುಬಿಗಿದುಕೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬೆಟ್ಟಮಕ್ಕಿಯ ತನ್ನ ಬಾಡಿಗೆ ಮನೆಯಲ್ಲಿ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಅನೇಕ ಸಂದರ್ಭದಲ್ಲಿ ಜೀವದ ನೂರಾರು ಜನರ ಜೀವ ಉಳಿಸಿದ್ದು ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತದೇಹವನ್ನು ಅವರ ಸ್ವಂತ ಊರು ಹೊಸನಗರಕ್ಕೆ ತೆಗೆದುಕೊಂಡು…

Read More

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read More

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More