Headlines

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.  ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ  48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ  ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…

Read More

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….

Read More

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…

Read More

ಎರಡು ಕಾರುಗಳ ನಡುವೆ ಅಪಘಾತ – ದುಬಾರಿ ಕಾರುಗಳು ಜಖಂ|Accident

ತೀರ್ಥಹಳ್ಳಿ : ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಸಕ್ರೆಬೈಲ್​ ಬಳಿಯಲ್ಲಿ ನಡೆದಿದೆ.  ಶಿವಮೊಗ್ಗ-ತೀರ್ಥಹಳ್ಳಿ ಹೆದ್ಧಾರಿಯಲ್ಲಿ ನಡೆದ ಘಟನೆಯಲ್ಲಿ, ಯಾರಿಗೂ ಅಪಾಯ ಸಂಭವಿಸಿಲ್ಲ. ಫೋರ್ಡ್​ ಇಕೋ ಹಾಗೂ ಕಿಯಾ ಕಾರು  ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳ ಒಂದೊಂದು ಬದಿಗೆ ಹೋಗಿ ನಿಂತಿವೆ.  ಘಟನೆ ಬೆನ್ನಲ್ಲೆ ಸ್ಥಳೀಯರು ಬಂದು ಕಾರಿನಲ್ಲಿದ್ದವರಿಗೆ ಆರೈಕೆ ಮಾಡಿದ್ಧಾರೆ.

Read More

ನಾಳೆ ಆಯೋಜಿಸಿರುವ ಕುಪ್ಪಳ್ಳಿಯಿಂದ – ತೀರ್ಥಹಳ್ಳಿ ಪಾದಯಾತ್ರೆ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು??? ಈ ಸುದ್ದಿ ನೋಡಿ

ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು. ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ,…

Read More

ಹೋರಿ ಬೆದರಿಸುವ ಸ್ಪರ್ಧೆ : ಇಬ್ಬರು ಸಾವು – 6 ಜನರಿಗೆ ಗಾಯ|bull competition

ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ…

Read More

ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್

ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.   ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ…

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More

ಇಂದಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯ ನಿರ್ವಹಿಸಬೇಕಾಗಿದೆ – ಹರತಾಳು ಹಾಲಪ್ಪ|sagara

ಸಾಗರ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗಾಂಧಿ ಮೈದಾನದಲ್ಲಿ ಮಲೆನಾಡು ರಹಸ್ಯ ವಾರಪತ್ರಿಕೆ ,ಸುದ್ದಿಮನೆ ಹಾಗೂ ಗ್ಲೋಬಲ್ ಡಿಜಿಟಲ್ ಮೀಡಿಯಾ ಆಯೋಜಿಸಿದ್ದ ವಾರ್ಷಿಕ ಸಂಭ್ರಮಾ‍ಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಸಮಸ್ಯೆಗಳನ್ನು…

Read More