Headlines

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ತೀರ್ಥಹಳ್ಳಿಯ ಯುವ ಸಾಹಿತಿ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ರಶ್ಮಿ ಸನಿಲ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ :

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ತೀರ್ಥಹಳ್ಳಿಯ ಯುವ ಸಾಹಿತಿ ಹಾಗೂ ಪತ್ರಕರ್ತ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ ರವರಿಗೆ  ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಪೋತೆರ ಮಹದೇವು ಹಾಗೂ ಮುಖ್ಯ ಅತಿಥಿಗಳಾದ ನಾಗರತ್ನಮ್ಮ,ಹುಲಿಯೂರುದುರ್ಗ ಲಕ್ಷೀ ನಾರಾಯಣ್,ಡಾ ಶಿವರಾಜ್ ಗೌಡ, ಹೆಚ್…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ Power outage scheduled on May 10, 2026, in Ripponpet and Heddaripura Gram Panchayat limits due to MESCOM electric line replacement work from 10 AM to 6 PM. ರಿಪ್ಪನ್ ಪೇಟೆ ಗ್ರಾಪಂ ವ್ಯಾಪ್ತಿ ಹಾಗೂ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ 10/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು…

Read More

ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ

ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು  ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ಹೊಸನಗರ ತಾಲೂಕು ಮುಂಬಾರು  ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ  ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ…

Read More

50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :

 ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…

Read More

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ ಶಿವಮೊಗ್ಗ :  ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು – ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ: 20651 / 20652) ನಿಲುಗಡೆಗೆ ಸೌಲಭ್ಯ ಒದಗಿಸಲು ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ನಿಲುಗಡೆ ಸೌಲಭ್ಯವನ್ನು 2025ರ ಅಕ್ಟೋಬರ್ 6 ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೊಳಿಸಿ ರೈಲ್ವೆ ಇಲಾಖೆಯು ಆದೇಶ ನೀಡಿದೆ….

Read More