ಹೊಸನಗರ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆದರ್ಶ್ ನಿಧನ|accident

ಹೊಸನಗರ: ಸೊನಲೆ ಜಂಕ್ಷನ್ ಬಳಿ  ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಟ್ಟಣದ ಯುವಕ ಆದರ್ಶ್ ನಿಧನ. ಹೊಸನಗರದ ದಿವಂಗತ ಪ್ರಕಾಶ್ ಹಾಗು ಆಶಾ ದಂಪತಿಗಳ ಪುತ್ರ ಆದರ್ಶ್ (23)ಕಳೆದ ಭಾನುವಾರದಂದು ಹೊಸನಗರ- ತೀರ್ಥಹಳ್ಳಿ ರಸ್ತೆಯ ಸೊನಲೆ ಜಂಕ್ಷನ್ ಬಳಿ ಬೈಕ್ ಅಪಘಾತದಲ್ಲಿ ಮೆದುಳಿಗೆ ಗಂಭೀರ ಗಾಯಗೊಂಡಿದ್ದರು, ಇವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿತ್ತು. ಚಿಕಿತ್ಸೆ ಗೆ ಸ್ಪಂದಿಸದ ಹಿನ್ನಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಮರಳಿ ಕರೆದುಕೊಂಡು ಬಂದು ಚಿಕಿತ್ಸೆ  ನೀಡಲಾಗುತ್ತಿತ್ತು, ವಿಧಿವಶಾತ್ ಇಂದು ಬೆಳಿಗ್ಗೆ ಶಿವಮೊಗ್ಗದ ಖಾಸಗಿ…

Read More

ಅ.30ರ ಶನಿವಾರ ಶಿವಮೊಗ್ಗಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ !

ಶಿವಮೊಗ್ಗ : ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 30ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.  ಅಂದು ಬೆಳಗ್ಗೆ 10 ಗಂಟೆಗೆ  ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 11 ಗಂಟೆಗೆ  ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.  ಅನಂತರ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ನಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಗೆ ಭೇಟಿ ನೀಡಿ  ಸಭೆಯಲ್ಲಿ ಭಾಗಿಯಾಗಲಿದ್ದಾರೆ.  ಸಂಜೆ 4 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. 

Read More

ಶಾಲಾ ಮೈದಾನದಲ್ಲಿ ಜೂಜಾಟ – ಹತ್ತು ಮಂದಿ ವಶಕ್ಕೆ|arrested

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಜೂಜಿನಲ್ಲಿ ತೊಡಗಿದ್ದ ಆರೋಪದ ಮೇರೆಗೆ 10 ಜನರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಂಧಿತರಿಂದ 25,300 ರೂ.ಹಾಗೂ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ರಂಗನಾಥ್, ಗಾದಿ ಲಿಂಗಪ್ಪ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು….

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..!

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control and veered into a forest area near Heggodu in Thirthahalli taluk. A few passengers sustained minor injuries, while a major tragedy was averted. Police have launched an investigation into the cause of the accident. ತೀರ್ಥಹಳ್ಳಿ, ಜೂನ್ 9: ತಾಲೂಕಿನ ಹೆಗ್ಗೋಡು ಸಮೀಪ…

Read More

ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ

SHIVAMOGGA | ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್‌ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ…

Read More

RIPPONPETE |ಕೆದಲುಗುಡ್ಡೆ ಶ್ರೀ ಶನೇಶ್ವರ ದೇವಾಲಯದಲ್ಲಿ ನಾಳೆ 29ನೇ ವರ್ಷದ ಜಾತ್ರಾ ಮಹೋತ್ಸವ

The 29th annual Jatra Mahotsava of Sri Shaneshwara Temple at Kedalugudde near Ripponpet will be held on March 14, 2026 with various religious rituals and traditional celebrations. ರಿಪ್ಪನ್‌ಪೇಟೆ : ಇಲ್ಲಿನ ಕೆದಲುಗುಡ್ಡೆ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ 29ನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 14, 2026 ರಂದು ಶನಿವಾರ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾರ್ಚ್ 13…

Read More

ಶರಾವತಿ ಹಿನ್ನಿರಿನಲ್ಲಿ ಸರಾಗವಾಗಿ ಈಜುತ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಸಾವು :

ಶಿವಮೊಗ್ಗದ ಸಿಂಹಧಾಮದ ಬಳಿ ಇರುವ ಖಾಸಗಿ  ಈಜುಕೊಳದಲ್ಲಿ ಈಜಲು ಹೋದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.  ಸ್ನೇಹಿತರೊಂದಿದೆ ಈಜಲು ಹೋಗಿದ್ದ ಅನಿಲ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.  ಈತನ ಸಾವಿನ ಬಗ್ಗೆ ಆತನ ಕುಟುಂಬ ವರ್ಗದಿಂದ ಅನುಮಾನ ವ್ಯಕ್ತವಾಗಿದೆ. ಹೊಸನಗರದ ಶರಾವತಿ ಹಿನ್ನೀರಿನಲ್ಲಿ ಸರಾಗವಾಗಿ ಈಜುಹೊಡೆಯುವ ಅನಿಲ್ ಕುಮಾರ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿರುವುದಕ್ಕೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಶಿವಮೊಗ್ಗದ ಸಿಂಹಧಾಮದ ಹಿಂಭಾಗದಲ್ಲಿ ಬರುವ ಕರಣ್ ಸ್ವಿಮ್ಮಿಂಗ್ ಫೂಲ್ ನಲ್ಲಿ ಅನಿಲ್ ಕುಮಾರ್ ನಿನ್ನೆ ಸ್ವಿಮ್ಮಿಂಗ್ ಫೂಲ್ ನಲ್ಲಿ…

Read More

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ…

Read More

ಗಡಿ ಗುರುತಿಗೆ ಬಂದ ಅರಣ್ಯಾಧಿಕಾರಿಗಳು – ಜಮೀನು ಕಳೆದುಕೊಳ್ಳುವ ಭಯದಲ್ಲಿ ರೈತ ಸಾವು|forest

ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಮಂಜಪ್ಪ ಎಂಬವರೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟವರು. ಅವರಿಗೆ ಸೇರಿದ ಜಾಗದ ಅರಣ್ಯ ಇಲಾಖೆ ಅಧಿಕಾರಿಗಳು ಗಡಿಗುರುತಿನ ಬಾಂದ್‌ ಕಲ್ಲು ಹಾಕಿದ್ದರಿಂದ ಅವರು ಆತಂಕಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ…

Read More