ಅಮ್ಮನಘಟ್ಟ ಜಾತ್ರಾ ಮಹೋತ್ಸವಕ್ಕೆ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ|ammanaghatta
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ದ ಏಕಶೀಲೆಯ ಹೆಬ್ಬಂಡೆಯಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಾ ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಪರಿಹರಿಸುವ ಶ್ರೀ ಜೇನುಕಲ್ಲಮ್ಮ ದೇವಿಯ ದರ್ಶನಕ್ಕೆ ಇಂದು 3ನೇ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಬೆಳಗ್ಗೆ 06 ಗಂಟೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು 08 ಗಂಟೆ ಹೊತ್ತಿಗೆ ಒಂದು ಕಿ.ಮೀ. ಗೂ ಅಧಿಕ ದೂರದಿಂದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಕಿರಿದಾದ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ…