Headlines

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ ಹಿಂಪಡೆತ; ಸಂಚಾರಕ್ಕೆ ಅನುವು|agumbe

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಎಲ್ಲಾ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15.09.2023 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

Read More

ಆಹ್ವಾನ ಸಿಗದಿದ್ದಕ್ಕೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್​ MLC ಪ್ರತಿಭಟನೆ : ಕೈ ಮುಗಿದು ವೇದಿಕೆಗೆ ಕರೆದ ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್​ಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮೇಲ್ದರ್ಜೆಗೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ತುಂಗಾ ನದಿಗೆ ನೂತನ ಸೇತುವೆ ಕಾಮಗಾರಿ ಸೇರಿ ಒಟ್ಟು 580.98 ಕೋಟಿ ರೂ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಚಾಲನೆ ನೀಡಲು ಆಗಮಿಸಿದ್ದರು. ಈ ವೇಳೆ ಹೊಳೆಹೊನ್ನೂರು ರಸ್ತೆಯಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More

ಕೊಲೆ ಮಾಡಿ ಶವವನ್ನು ಬೈಕಿನಲ್ಲಿ ಕೂರಿಸಿಕೊಂಡು ಬಂದು ಸರ್ಕಲ್ ನಲ್ಲಿ ಮಲಗಿಸಿ ಹೋದ ಆರೋಪಿಗಳು – ಅನೈತಿಕ ಸಂಬಂಧದ ಶಂಕೆ|crime news

ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯ ಶವವನ್ನು ಕೂರಿಸಿಕೊಂಡು ಬಂದು ಊರಿನ ಸರ್ಕಲ್ ನಲ್ಲಿ ಮಲಗಿಸಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಮುತ್ತಳ್ಳಿ ಗ್ರಾಮದಲ್ಲಿ ನಡೆದಿದೆ.ಇದು ಕೊಲೆ ಎಂದು ಕುಟುಂಬ ಆರೋಪಿಸಿದೆ. ಘಟನೆಯ ಹಿನ್ನಲೆ :  ಶಿರಾಳಕೊಪ್ಪ ಪೊಲೀಸ್ ಠಾಣೆಯ ಮುತ್ತಳ್ಳಿ ಗ್ರಾಮದಲ್ಲಿ ಕೃಷಿ ಕಾರ್ಮಿಕನಾಗಿರುವ ಸೋಮಪ್ಪ(30) ಈತನಿಗೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಗಂಗಮ್ಮ ಎಂಬ ಮಹಿಳೆಯೊಂದಿಗೆ ಸ್ನೇಹವಿದ್ದು, ಆಕೆಯೇ ಕರೆಯಿಸಿ ಸೋಮಪ್ಪನನ್ನ ಕೊಲೆ ಮಾಡಿ ಕಳುಹಿಸಿರುವುದಾಗಿ ಮೃತನ‌ ಕುಟುಂಬ ಆರೋಪಿಸಿದೆ. ಸೋಮಪ್ಪ ಈ ಹಿಂದೆ ಕೆಲಸದ…

Read More

ಸಾಹಿತಿ ನಯನ ಕೋಟ ರವರಿಗೆ ಒಲಿದ ರಾಜ್ಯಮಟ್ಟದ ಗುರುಕುಲ ಸಾರ್ವಭೌಮ ಕವಿತಾ ಕೃಷ್ಣ ಪ್ರಶಸ್ತಿ:

ಚಿತ್ರದುರ್ಗ: ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿ “ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ” ಪ್ರಶಸ್ತಿಗೆ ಚಿತ್ರದುರ್ಗದ ಸಾಹಿತಿಯಾದ ನಯನ ಕೋಟ ರವರು ಆಯ್ಕೆಯಾಗಿದ್ದಾರೆ.  ಈ ಕುರಿತು ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಯನ ಕೋಟ ರವರು ಮೂಲತಃ ಉಡುಪಿ ಜಿಲ್ಲೆಯ ಕೋಟದವರು.ಪ್ರಸ್ತುತ  25 ವರ್ಷದಿಂದ ಚಿತ್ರದುರ್ಗದ ನಿವಾಸಿ. ಇವರ ತಾಯಿ ಸಾಹಿತಿ ನಾಗರತ್ನ ಬಿ(ವನಸುಮ ವಡ್ಡರ್ಸೆ) ಅವರಿಂದ ಪ್ರೇರಣೆ ಪಡೆದು 20 ವರ್ಷಗಳಿಂದ ಎಲೆಮರೆಯ…

Read More

ಹಲವು ವರ್ಷಗಳ ಹಿಂದೆಯೇ ಹಕ್ಕುಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ : ಕುಮಾರ್ ಬಂಗಾರಪ್ಪ

ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.  ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು…

Read More

ಭಾರಿ ಗಾಳಿ ಮಳೆಗೆ ನೆಲಸಮಗೊಂಡ ದನದ ಕೊಟ್ಟಿಗೆ : ಜಾನುವಾರುಗಳಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ : ಇಲ್ಲಿನ  ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಗುಬ್ಬಿಗಾ ಗ್ರಾಮದ ಚೆಲುವಣ್ಣ ಎಂಬವರ ಮನೆಯ ಹಿಂಬದಿಯ ದನದ ಕೊಟ್ಟಿಗೆ ಇಂದು ಕುಸಿದು ಬಿದ್ದ ಪರಿಣಾಮ 1 ಜರ್ಸಿ ಹಸು, 2 ನಾಟಿ ಹಸುಗಳಿಗೆ ಗಾಯಗಳಾಗಿವೆ.1 ನಾಟಿ ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಬೆಳ್ಳೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ…

Read More

Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್

ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…

Read More
Exit mobile version