Headlines

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ

Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ ಶಿವಮೊಗ್ಗದಲ್ಲಿ ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದ ರಸ್ತೆಯೊಂದರಲ್ಲಿ ಚರಂಡಿಗೆ ಹಾಕಲಾಗಿದ್ದ ಸ್ಲ್ಯಾಬ್​ ಕುಸಿದು ಮುತ್ತಪ್ಪ (45)  ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.  ಮೃತ ವ್ಯಕ್ತಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿಯಾಗಿದ್ದಾರೆ. ಗುಜರಿ ವ್ಯಾಪಾರ ಮಾಡುತ್ತಿದ್ದ ಮುತ್ತಪ್ಪ ಮೂತ್ರ ವಿಸರ್ಜಿಸುತ್ತಿದ್ದ ವೇಳೆಯಲ್ಲಿ ದಿಡೀರ್ ಸ್ಲ್ಯಾಬ್​ ಕುಸಿದಿದೆ. ಪರಿಣಾಮ ಅವರು ಚರಂಡಿಗೆ ಬಿದ್ದಿದ್ದಾರೆ.ಸುಮಾರು ಹತ್ತು ಅಡಿ…

Read More

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ  ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More

ರಿಪ್ಪನ್‌ಪೇಟೆ ನಾಡಕಛೇರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ|beluru

“ಶಾಸಕ ಗೋಪಾಲಕೃಷ್ಣ ಬೇಳೂರು ನಾಡಕಛೇರಿ ದಿಢೀರ್ ಭೇಟಿ’’ ರಿಪ್ಪನ್‌ಪೇಟೆ;-ಕೆರೆಹಳ್ಳಿ ಹೋಬಳಿ ಕಛೇರಿಗೆ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯಕ್ಕೆ ಸರಿಯಾಗಿ ಕಛೇರಿಗೆ ಅಧಿಕಾರಿಗಳು ಬರುತ್ತಿಲ್ಲ ಮತ್ತು ಗ್ರಾಮ ಸಹಾಯಕ ಪ್ರವೀಣ್ ಎಂಬಾತನ ವಿರುದ್ಧ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ ಎಲ್ಲಿದ್ದಾನೆ ಎಂದು ಪ್ರಶ್ನಿಸಿದಾಗ ಉಪತಹಶೀಲ್ದಾರ್ ಊಟಕ್ಕೆ ಹೋಗಿದ್ದಾನೆ ಬಂದಿಲ್ಲ ಎಂಬ ಉತ್ತರ ನಿಮ್ಮ ಊಟದ ಸಮಯ ಎಷ್ಟು ಈಗ ಎಷ್ಟು ಸಮಯ ಎಂದಾಗ ಗ್ರಾಮ ಲೆಕ್ಕಾಧಿಕಾರಿ ಹೊಸನಗರಕ್ಕೆ ಮುಟೇಷನ್ ದಾಖಲೆ ತರಲು…

Read More

Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್

ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…

Read More

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ  ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ…

Read More

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!! ಹೊಸನಗರ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಪೊಲೀಸರು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಿಲ್ಲೋಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More
Exit mobile version