Headlines

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ|airport

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ ಶಿವಮೊಗ್ಗ : ಇಲ್ಲಿನ ಕುವೆಂಪು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಮಾಹಿತಿ ಫಲಕದಲ್ಲಿ ಹಿಂದಿ ಭಾಷೆಗೆ ಆದ್ಯತೆ ನೀಡಲಾಗಿದ್ದು, ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಟ್ವಿಟರ್ ಖಾತೆಯಲ್ಲಿ ಕೆಲ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಡಿಜಿಟಲ್ ಮಾಹಿತಿ ಫಲಕದ ಫೋಟೋ ಶೇರ್ ಮಾಡಿ, ಹಿಂದಿ ಹೇರಿಕೆ ಸರಿಯಲ್ಲ ಎಂದು ದೂರಿದ್ದಾರೆ. ಇದು ಯಾವುದೋ ಹಿಂದಿ ರಾಜ್ಯವಲ್ಲ….

Read More

ಈಶ್ವರಪ್ಪರವರಿಗೆ ಮತ್ತೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ಸಿಕ್ಕ ಹಿನ್ನೆಲೆಯಲ್ಲಿ  ಮರಳಿ ಅವರಿಗೆ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಾನಮಾನ ನೀಡುವುದು ವರಿಷ್ಟರಿಗೆ ಬಿಟ್ಟ ವಿಚಾರ ಎಂದರು. ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಈಶ್ವರಪ್ಪ…

Read More

ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆ; 1 ವರ್ಷದ ಬಳಿಕ ಕಂಪ್ಲೆಂಟ್ ಕೊಟ್ಟ ಮಾಲೀಕ

Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year. ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು  ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು….

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು. ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಯುತಿದ್ದು ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆವರಣದಲ್ಲಿ…

Read More

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

ದಿಗ್ವಿಜಯ ನ್ಯೂಸ್​ ನ ಸುದ್ದಿ ಸಂಪಾದಕ ಪ್ರಶಾಂತ್​ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :

  ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…

Read More