Headlines

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ | Crime news

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.! ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!? ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ. ಹಂತಕರು ಯಾವ ಮಟ್ಟಕ್ಕೆ ರಿವೆಂಜ್…

Read More

ಸೂಡೂರು ಚೆಕ್ ಪೋಸ್ಟ್ ಬಳಿಯೇ ಲಕ್ಷಾಂತರ ಬೆಲೆಬಾಳುವ ಸಾಗುವಾನಿ ಮರಗಳು ಕಳವು:

ರಿಪ್ಪನ್ ಪೇಟೆ : ಅಕ್ರಮವಾಗಿ ಬೃಹದಾಕಾರದ ಸಾಗುವಾನಿ ಮರಗಳನ್ನು ಕಡಿದು ಕಳ್ಳತನ ಮಾಡಿರುವ ಘಟನೆ ಸೂಡೂರು ಅರಣ್ಯ ಚೆಕ್ ಪೋಸ್ಟ್ ಬಳಿ ನಡೆದಿದೆ.  ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸೂಡೂರು ಮುಖ್ಯ ರಸ್ತೆಯ ಬಳಿ ಹಾಗೂ ಸೂಡೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ನ ಕೂಗಳತೆಯ ದೂರದಲ್ಲಿ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಮರಗಳ್ಳರು ಅಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂ ಬೆಲೆಬಾಳುವ ಸಾಗುವನಿ ಮರಗಳನ್ನು ಕಡಿದು ಮರದ ತುಂಡುಗಳನ್ನು ಅಕ್ರಮ ಸಾಗಾಟ…

Read More

ಕಂತೆ ಕಂತೆ ಹಣ ಎಣಿಸಿದ ಸಾಗರ ನಗರಸಭೆ ಉಪಾಧ್ಯಕ್ಷ – ವೀಡಿಯೋ ವೈರಲ್| ಶಾಸಕ ಹಾಲಪ್ಪ ಆಪ್ತನ ವಿರುದ್ದ ಪ್ರಕರಣ ದಾಖಲು|sagara

ಸಾಗರ ನಗರಸಭೆ ಉಪಾಧ್ಯಕ್ಷರ ಮನೆಯಲ್ಲಿ ಹಣ ತುಂಬುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚುನಾವಣೆ ಆಯೋಗ ಎಫ್ಐಆರ್ ದಾಖಲಿಸಿಕೊಂಡಿದೆ. ಸಾಗರ ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ  ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು  ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ…

Read More

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ Shivamogga will host the Panchapeethadheeshwara Addapallakki Mahotsava and Dharma Jagruti Convention on May 17, where former CM B.S. Yediyurappa will be honoured in the presence of prominent seers and leaders. ಶಿವಮೊಗ್ಗ: ನಗರದದಲ್ಲಿ ಮೇ 17ರಂದು ನಡೆಯಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಮಾವೇಶ…

Read More

ರೈತ ಪರ ಹೋರಾಟಗಾರ ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂಧರ್ಭದಲ್ಲಿ ಮೃತರ ಪತ್ನಿ ಪಿತಾಂಬರಮ್ಮ ಹಾಗೂ ಪುತ್ರರಾದ ಕಗ್ಗಲಿ ಲಿಂಗಪ್ಪ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಕಾಂಗ್ರೆಸ್ ರಿಪ್ಪನ್…

Read More

ಲಾರಿ – ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಭದ್ರಾವತಿ : ಕಾರೇಹಳ್ಳಿಯ ತಾಳೇ ಎಣ್ಣೆಯ ಫ್ಯಾಕ್ಟರಿ ಬಳಿ ಲಾರಿ ಮತ್ತು ಬೈಕ್ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಸಾವು ಕಂಡಿರುವ ಘಟನೆ ನಡೆದಿದೆ. ಕಾರೇಹಳ್ಳಿ ಫ್ಯಾಕ್ಟರಿಯ ಬಳಿ KA-17-B-6710 ಕ್ರಮ ಸಂಖ್ಯೆಯ ಲಾರಿಯೊಂದು ಬೈಕ್ ಸವಾರನಿಗೆ ಗುದ್ದಿದೆ. ಬೈಕ್ ಸವಾರ ಗಾಯಗೊಂಡು ಬಿದ್ದಿದ್ದಾನೆ. ಹಿಂಬದಿಯಲ್ಲಿ ಬರುತ್ತಿದ್ದ ಸ್ಟೀಫನ್ ಕ್ರಿಸ್ಟೋಫರ್ ಎಂಬ ಚರ್ಚ್ ನ ಫಾದರ್ ಅವರನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ವ್ಯಕ್ತಿ ಆನಂದ ಕುಮಾರ್ ಎಂದು ಗುರುತಿಸಲಾಗಿದ್ದು. ಅವರಿಗೆ ಹೆಚ್ಚಿನ…

Read More

ತೀರ್ಥಹಳ್ಳಿ : ಪ್ಲೈವುಡ್ ಕಟ್ ಮಾಡುವಾಗ ಮಿಷಿನ್ ನ ಬ್ಲೇಡ್ ಹರಿದು ಕಾರ್ಮಿಕ ಸಾವು|Maaluru

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ಲೇವುಡ್ ಕೆಲಸಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಅಚಾನಕ್ಕಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡಾಸ್ ಕೊಪ್ಪ ಗ್ರಾಮದ ಆದಿತ್ಯ ಎಂಬುವವನೊಬ್ಬ ಪ್ಲೇವುಡ್ ವರ್ಕ್ ಗಾಗಿ ತೆರಳಿದ್ದರು. ಪ್ಲೈವುಡ್ ಕಟ್ ಮಾಡುವ ವೇಳೆ ಮಿಷಿನ್ ನ ಬ್ಲೇಡು ಅಚಾನಕ್ಕಾಗಿ ಆದಿತ್ಯನ ಕುತ್ತಿಗೆಯನ್ನ ಕೊಯ್ದಿದೆ.ಗಾಯಾಳುವನ್ನು ತಕ್ಷಣ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸುವಾಗ ಆದಿತ್ಯ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ…

Read More

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಒಂಬತ್ತು ಮಂದಿಗೆ ಗಾಯ|accident

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ.  ನಡೆದಿದ್ದೇನು..?? ಖಾಸಗಿ ಬಸ್​ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್​ ಟರ್ನಿಂಗ್​ನಲ್ಲಿ ಬಸ್​ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಬಸ್​…

Read More

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರೀಕರ ಕಂದಾಯ ಪಾವತಿ ಸಮಸ್ಯೆಗೆ ಮುಕ್ತಿ

ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ  ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.  ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ…

Read More