ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!
ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ…