Headlines

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಯುವಕ ಸ್ಥಳದಲ್ಲೇ ಸಾವು – ಇನ್ನೋರ್ವ ಗಂಭೀರ|Accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪ ಗ್ಯಾಸ್ ಸಿಲಿಂಡರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೊರಟಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಹಾಗೂ ಆಯನೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬೈಕ್ ನ ನಡುವೆ ಈ ಅಪಘಾತ ಸಂಭವಿಸಿದ್ದು. ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಆಯನೂರು ಕೋಟೆ ನಿವಾಸಿ ಯಶವಂತ್ ಎಂಬ ವ್ಯಕ್ತಿ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೈಕ್ ನ ಹಿಂಬದಿ ಕೂತಿದ್ದ ವ್ಯಕ್ತಿಯ ಕಾಲು ಮುರಿದಿದ್ದು ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ…

Read More

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

ಹೊಸನಗರ ತಾಲೂಕ್ ಜೆಡಿಎಸ್ ನೂತನ ಅಧ್ಯಕ್ಷರಾಗಿ ಎನ್ ವರ್ತೇಶ್ ಅಧಿಕಾರ ಸ್ವೀಕಾರ:

ಹೊಸನಗರ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಕ್ಷೀಣಿಸುತ್ತಿದ್ದು ಇದನ್ನು ಬಲಪಡಿಸಲು ಹೊಸನಗರ ತಾಲ್ಲೂಕು ಕಾರ್ಯಕರ್ತರ ಸಭೆ ನಡೆಸಿ ಸಂಘಟನೆ ಮಾಡುವ ಉದ್ದೇಶದಿಂದ ಆಗಸ್ಟ್ 20 ಶನಿವಾರ 11 ಗಂಟೆಗೆ ಹೊಸನಗರ ಪ್ರವಾಸಿ ಮಂದಿರದ ಹತ್ತಿರವಿರುವ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್‌ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಪತ್ರಿಕಾಘೋಷ್ಟಿ…

Read More

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ ರಿಪ್ಪನ್ ಪೇಟೆ – ಹೊಸನಗರ ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಗರ್ತಿಕೆರೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಬಷೀರ್ ಅಹಮದ್ ಹೆಚ್ ಎಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಗರ್ತಿಕೆರೆ ಗ್ರಾಪಂ ಸದಸ್ಯರಾಗಿರುವ ಬಷೀರ್ ಅಹಮದ್ ಹೆಚ್ ಎಂ ಅವರು ಸ್ಥಳೀಯ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಗ್ರಾಮೀಣ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಜೀಪ್ – ಚಾಲಕ ಸ್ಥಳದಲ್ಲಿಯೇ ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45)…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ…

Read More

ಸೊರಬದಲ್ಲಿ ಎತ್ತು ತೊಳೆಯುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು :

ಸೊರಬ : ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ….

Read More

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್‌ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…

Read More

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು  ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಮ ಪಂಚಾಯತಿ ಮಳಲಿಕೊಪ್ಪ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ 15 ಕ್ಕೂ ಹೆಚ್ಚು ನಾಮಫಲಕಗಳು ಧ್ವಂಸವಾಗಿದ್ದು ಪುಂಡರ ಪುಂಡಾಟಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಚಿನ್ ಗೌಡ ಪ್ರತಿನಿಧಿಸುವ ಮಳಲಿಕೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅನುದಾನದಲ್ಲಿ ವಿವಿಧ ಊರುಗಳಿಗೆ ತೆರಳುವ ಮಾರ್ಗಕ್ಕೆ ನಾಮಫಲಕವನ್ನು ಅಳವಡಿಸಲಾಗಿತ್ತು ಆದರೆ ಕಳೆದ ಬುಧವಾರ ರಾತ್ರಿ ಕಿಡಿಗೇಡಿಗಳು 15 ಕ್ಕೂ ಹೆಚ್ಚು ನಾಮಫಲಕವನ್ನು…

Read More