ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death
ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸಾಗರ…