ರಿಪ್ಪನ್ಪೇಟೆ : ದನದ ಕೊಟ್ಟಿಗೆಯ ಹಂಚನ್ನು ಕಿತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್ ಬೆದರಿಕೆ !!! ಪ್ರಕರಣ ದಾಖಲು|assault
ರಿಪ್ಪನ್ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಬೆನವಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರಪ್ರಸಾದ್ ಎಂಬವರು ಏಕಾಏಕಿ ಕಿತ್ತುಹಾಕಿದ್ದರು. ಈ ಹಿನ್ನೆಲೆಯಲ್ಲಿ ಅದನ್ನು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ ಮನೆಯಲ್ಲಿ ಎರಡು ಕೊಲೆಯಾಗಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು…