Headlines

ಹೊಸನಗರ ಸಮೀಪದಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಯಾಣಿಕರಿಗೆ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More

ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ಯಡಿಯೂರಪ್ಪ :

 ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಪುತ್ರ ವಿಜಯೇಂದ್ರ ಅವರು ಚುನಾವಣಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಬದಲು ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕು ಎಂದು ಇಲ್ಲಿನ ಮತದಾರರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿಯೂ ವಿಜಯೇಂದ್ರ…

Read More

ಶಿವಮೊಗ್ಗಜಿಲ್ಲೆಯ ನೂತನ ಮಂತ್ರಿಗಳಿಗೆ ಶ್ರೀ ರೇಣುಕಾನಂದ ಸ್ವಾಮೀಜಿಗಳಿಂದ ಅಭಿನಂದನೆ.

ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ಕೆಎಸ್ ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ರವರನ್ನು ಸಚಿವರನ್ನಾಗಿ ಮಾಡಿದ್ದಕ್ಕೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ.  ರಿಪ್ಪನ್ ಪೇಟೆ ಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸರಳ ಸಜ್ಜನಿಕೆಯ ವ್ಯಕ್ತಿತ್ವ ಜನನಾಯಕ ಆರಗ ಜ್ಞಾನೇಂದ್ರ ರವರಿಗೆ ರಾಜ್ಯದ ಗೃಹ ಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿರುವುದು ಸಂತೋಷವಾಗಿದೆ. …

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

ಅಕ್ಟೋಬರ್ ನಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ,ದೇಶದಲ್ಲಿ ದಂಗೆ:ಭವಿಷ್ಯವಾಣಿ

ನವದೆಹಲಿ:ಕೊರೊನಾ ಮೊದಲನೇ,ಎರಡನೇ ಅಲೆಯ ವಿಚಾರದಲ್ಲಿ ಬಹುತೇಕ ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಮತ್ತೊಂದು ಆತಂಕಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೇ 6ರಿಂದ 26ರವರೆಗಿನ ಅವಧಿಯಲ್ಲಿ ಕೊರೊನಾ ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಅವಧಿ ಸ್ವಲ್ಪದಿನ ಅಂದರೆ ಜೂನ್ 3ರವರೆಗೆ ಹೋಗಬಹುದು. ಈ ಅವಧಿ ಮುಗಿದ ನಂತರ, ಕೊರೊನಾ ವೈರಸಿನ ಪ್ರಭಾವ ಕಮ್ಮಿಯಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದರು. ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ಪ್ರಧಾನಿ ಮೋದಿಯವರು ಎಡವಿದ್ದು ಅವರು ರಾಜೀನಾಮೆ ನೀಡಬೇಕಾದ…

Read More

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ  ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ  ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…

Read More

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್‌ ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ…

Read More
Exit mobile version