ಕೆಂಚನಾಲ : ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ – ಎರಡು ಪ್ರತ್ಯೇಕ ಪ್ರಕರಣ ದಾಖಲು|rpet

ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ. ನಡೆದಿದ್ದೇನು..?? ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು…

Read More

ಸಾಗರದಲ್ಲಿ ಇಂಜೆಕ್ಷನ್‌ ಪಡೆದ 14 ಮಕ್ಕಳು ಅಸ್ವಸ್ಥ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಹರತಾಳು ಹಾಲಪ್ಪ

ಸಾಗರ : ಜ್ವರ, ಕೆಮ್ಮು, ನೆಗಡಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ 14  ಮಕ್ಕಳು ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆಂಟಿಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.  ಕರ್ತವ್ಯದಲ್ಲಿದ್ದ ವೈದ್ಯರು ಅಸ್ವಸ್ಥಗೊಂಡ 14 ಮಕ್ಕಳಲ್ಲಿ 4 ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ…

Read More

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…

Read More

ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…

Read More

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಹಾಗೂ ರಿಪ್ಪನ್ ಪೇಟೆ ಗ್ರಾಮಾಡಳಿತದಿಂದ ಚಿಕ್ಕಬೀರನ ಕೆರೆಗೆ ಕಾಯಕಲ್ಪ:

ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಖಾಸಗಿ ಬಸ್ ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿ – ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಚಲಿಸುತಿದ್ದ ಖಾಸಗಿ ಬಸ್ ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿ – ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ :  ಚಲಿಸುತ್ತಿದ್ದ ಬಸ್‌ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೋಡೂರು ಸಮೀಪದ ಶಾಂತಪುರದಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಅಧಿಕ ಜನರಿದ್ದು ತಿರುವಿನಲ್ಲಿ ಚಾಲಕ ಅತಿವೇಗದಲ್ಲಿ ಬಸ್ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಗುರುಶಕ್ತಿ ಬಸ್‌ ಗೆ ಕೀಳಂಬಿ ನಿಲ್ದಾಣದಲ್ಲಿ ಮಗುವಿನೊಂದಿಗೆ…

Read More

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ. ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ…

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More

ರಿಪ್ಪನ್‌ಪೇಟೆಯಲ್ಲಿ ಕೆಂಪೇಗೌಡ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ರಥಕ್ಕೆ ಅದ್ದೂರಿ ಸ್ವಾಗತ|Ripponpet

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿಯ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಸಿದ್ಧ ದೇವಾಲಯಗಳು, ಪ್ರಸಿದ್ಧ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಕೆಂಪೇಗೌಡರ ಪುತ್ಥಳಿ ಕೆಳಗೆ ಇಡಲಾಗುವುದು. ಈ ಕಾರ್ಯಕ್ರಮವು ಸರ್ಕಾರದ ವತಿಯಿಂದ ನಡೆಯುತ್ತಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯುತ್ತಿದೆ. ಮೃತ್ತಿಕೆ ಸಂಗ್ರಹ ಅಭಿಯಾನ ರಥವು ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆಯೇ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ…

Read More