ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ. ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…