Headlines

ಸಾಗರ : ಮಹಿಳೆಗೆ ಅಮಿಷವೊಡ್ಡಿ ಮತಾಂತರಕ್ಕೆ ಯತ್ನ :ಇಬ್ಬರ ಬಂಧನ

ಶಿವಮೊಗ್ಗ : ಸಾಗರ ತಾಲೂಕಿನಲ್ಲಿ ಮತಾಂತರಕ್ಕೆ ಯತ್ನಿಸಿದ್ದ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ತಾಲೂಕಿನ ತಾಳಗುಪ್ಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದ ಜೋಗ್‌ಫಾಲ್ಸ್‌ನ ಅನಿಲ್ ಕುಮಾರ್ ಹಾಗೂ ಪತ್ನಿ ಪ್ರಶಾಂತಿ ಅವರನ್ನು ಬಂಧಿಸಲಾಗಿದೆ. ಜ್ಯೋತಿ ಎಂಬುವವರ ಪತಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರ ಮನೆಗೆ ಬಂದಿದ್ದ ಪ್ರಶಾಂತಿ ಮತ್ತು ಅನಿಲ್ ಕುಮಾರ್ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ.  ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ…

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

ಹೊಸನಗರ : ಮಾರುತಿಪುರ ಗ್ರಾಪಂ ಮಾಜಿ ಅಧ್ಯಕ್ಷರಾದ ಓಂಕೇಶ್ ಗೌಡ್ರು ನಿಧನ :

ಹೊಸನಗರ : ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಓಂಕೇಶ್ ಗೌಡ್ರು ಸಂಪಳ್ಳಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಓಂಕೇಶ್ ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದು. ಶ್ರೀಯುತರು 20 ವರ್ಷಕ್ಕೂ ಹೆಚ್ಚು ಕಾಲ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ,ಸತತ 2 ಬಾರಿ ಮಾರುತಿಪುರ ಪಂಚಾಯತ್ ಸಂಪಳ್ಳಿ ಕ್ಷೇತ್ರದಿಂದ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರು ಆಯ್ಕೆಯಾಗಿದ್ದರು. ಓಂಕೇಶ  ಗೌಡ್ರು  ಸಂಪಳ್ಳಿ ಅವರ ಅಕಾಲಿಕ ನಿಧನಕ್ಕೆ  ಸಂಬಂಧಿಕರು,ಸ್ನೇಹಿತರೂ…

Read More

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ LED ಬೋರ್ಡ್ ಕುಸಿದು ನಾಲ್ವರಿಗೆ ಗಾಯ

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ LED ಬೋರ್ಡ್ ಕುಸಿದು ನಾಲ್ವರಿಗೆ ಗಾಯ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿ ವೇಳೆ ಎಲ್‌ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಶಿವಮೊಗ್ಗ (Shivamogga) ನಗರದ ಗಾಂಧಿ ಬಜಾರ್‌ನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಭಾರಿ ಗಾತ್ರದ ಗಾತ್ರದ ಎಲ್‌ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಖಾಸಗಿ ನ್ಯೂಸ್‌ ಚಾನೆಲ್‌ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿದ್ದಾರೆ….

Read More

ಶಿವಮೊಗ್ಗದ ರಾಜಾಕಾಲುವೆಯಲ್ಲಿ ತೇಲಿ ಬಂತು ನವಜಾತ ಶಿಶುವಿನ ಮೃತದೇಹ :

ಶಿವಮೊಗ್ಗ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆ ಸುರಿದಿತ್ತು.ಇಂದು ಆರ್ ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ನವಜಾತ ಶಿಶುವೊಂದರ ಮೃತದೇಹ ತೇಲಿಬಂದ ಘಟನೆ ನಡೆದಿದೆ. ಸ್ಥಳೀಯವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಎಸ್​ಡಿಪಿಐ ಪಕ್ಷದ ಕಾರ್ಯಕರ್ತರು ಕಸದ ರಾಶಿ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಸುಮಾರು ಒಂದು ತಿಂಗಳ ನವಜಾತ ಶಿಶು ಇದಾಗಿದೆ. ನೆನ್ನೆಯ ದಿನ ಮಗುವೊಂದು ತೇಲಿ ಹೋಗಿರುವ ಬಗ್ಗೆ ಆರ್ ಎಂಎಲ್ ನಗರದ ಮಹಿಳೆಯೊಬ್ಬರು ಎಸ್ ಡಿಪಿಐ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಆ ಹಿನ್ನಲೆಯಲ್ಲಿ …

Read More

ಬಿಳ್ಕೊಡುಗೆ ಸಮಾರಂಭ::

  ಹುಲ್ತಿಕೊಪ್ಪ:ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ  ಸಿಬ್ಬಂದಿಗಳು ಪದೋನ್ನತಿ ಹೊಂದಿ ಬೇರೆ ಕಡೆಗೆ ವರ್ಗಾವಣೆಗೊಂಡ  ಶ್ರೀಮತಿ ಲಕ್ಷ್ಮಿ ,ಶ್ರೀಮತಿ ಕುಸುಮ ಸಿಸ್ಟರ್ ಹಾಗೂ  ಹೆಚ್ ಪಿ ನಾಗರಾಜ್  ಅವರನ್ನು ಗೌರವ ಪೂರ್ಣವಾಗಿ  ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಚಂದ್ರಗುತ್ತಿಯಲ್ಲಿ ಸೇವೆಸಲ್ಲಿಸಿ ನಿವೃತ್ತರಾದ ಇಂದುಧರ್ ಪಾಟೀಲ್ ಸರ್ ಅವರ ಕಾರ್ಯವನ್ನು ಸ್ಮರಿಸಿ ಅಭಿನಂದಿಸಲಾಯಿತು,  ಈ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾಕ್ಟರ್ ವಿನಯ್ ಕುಮಾರ್ ಪಾಟೀಲ್ ರವರು ಮಾತನಾಡಿ ಯಾವುದೇ ಒಂದು ಆಡಳಿತ ವ್ಯವಸ್ಥೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಸೇವೆ…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರ ಆಣೆ ಪ್ರಮಾಣ ಪಂಥಾಹ್ವಾನಕ್ಕೆ ಶಾಸಕ ಹಾಲಪ್ಪರಿಂದ ಡೇಟ್ ಫಿಕ್ಸ್ : ಸವಾಲು ಸ್ವೀಕರಿಸುವರೇ ಮಾಜಿ ಶಾಸಕರು???

ಸಾಗರದಲ್ಲಿ ಆಣೆ ಪ್ರಮಾಣದ ರಾಜಕೀಯ ಮೇಲಾಟ ತಾರಕಕ್ಕೇರಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಶಾಸಕ ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ, ತಾಕತಿದ್ದರೆ ಕಮೀಷನ್ ಪಡೆದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲಿಗೆ ಇಂದು ಪ್ರತಿಕ್ರಿಯಿಸಿರುವ ಶಾಸಕ ಹರತಾಳು ಹಾಲಪ್ಪ ಪ್ರಮಾಣ ಮಾಡುವ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ…

Read More

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಕು|| ಪ್ರಣತಿ ಅಣ್ಣಪ್ಪ ರವರಿಗೆ ಶಾಸಕರಿಂದ ಸನ್ಮಾನ|pranathi

ರಿಪ್ಪನ್‌ಪೇಟೆ : ಪಟ್ಟಣದ ಗಾನ ಕೋಗಿಲೆ ಕುಮಾರಿ ಪ್ರಣತಿ ಅಣ್ಣಪ್ಪ ರವರಿಗೆ ಇತ್ತೀಚೆಗೆ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ ಲೋಕದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡು ನಾಡಿನಾದ್ಯಂತ ಗಾನ ಸುಧೆಯನ್ನು ಹರಿಸಿ ಸಂಗೀತ ಪ್ರಿಯರಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪ್ರತಿಭೆ ರಿಪ್ಪನ್ ಪೇಟೆಯ ಪ್ರಣತಿ…

Read More

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ ರಿಪ್ಪನ್ ಪೇಟೆ :  ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ರಿಪ್ಪನ್ ಪೇಟೆ ರೋಟರಿ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷ ಎಂ ಬಿ. ಲಕ್ಷ್ಮಣಗೌಡ ದಂಪತಿಗಳು ಈ ತಿಂಗಳು ಅಮೆರಿಕಾದ ವರ್ಜೀನಿಯಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ 12ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಬಿ ಲಕ್ಷ್ಮಣಗೌಡ ಅಮೆರಿಕಾದಲ್ಲಿ ನಡೆಯುವ ಅಕ್ಕ…

Read More
Exit mobile version