Headlines

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…

Read More

ತರಗತಿಯಲ್ಲಿ ಹಿಜಾಬ್ ಧರಿಸಿ ವಿಧ್ಯಾರ್ಥಿನಿಯರು ಹಾಜರ್ : ಸಿಹಿ ಹಂಚಿ, ಹಿಜಾಬ್ ಗೆ ಅಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು

ರಿಪ್ಪನ್‌ಪೇಟೆ: ಶಾಸಕ ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಬಿಜೆಪಿ ಕಾರ್ಯಕರ್ತರು ಶ್ರೀಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸಿಹಿ ವಿತರಿಸುವ ಸಂದರ್ಭದಲ್ಲಿ ಹಿಜಾಬ್‌ಗೆ ಆಕ್ಷೇಪವ್ಯಕ್ತ ಪಡಿಸಿರುವ ಘಟನೆ ಇಂದು ನಡೆದಿದೆ.  ವಿಶೇಷ ಪೂಜೆಯ ನಂತರ ಪಕ್ಕದ ಸರ್ಕಾರಿ ಶಾಲೆಗೆ ತೆರೆಳಿದ ಬಿಜೆಪಿ ಮುಖಂಡರ ತಂಡ ತರಗತಿಯ ಒಳಗಡೆ ಮಕ್ಕಳಿಗೆ ಸಿಹಿ ಹಂಚುವ ಸಮಯದಲ್ಲಿ ಕೆಲವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವುದು ಗಮನಿಸಿದ್ದಾರೆ. ಅಸಮಧಾನಗೊಂಡ ಮುಖಂಡರು ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡು…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನ : ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.  ರಿಪ್ಪನ್‌ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್…

Read More

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…

Read More

ರಿಪ್ಪನ್‌ಪೇಟೆ : ಗ್ರಾಪಂ ಸದಸ್ಯರ ಕಡೆಗಣನೆ ವಿರೋಧಿಸಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ – ಕಾಮಗಾರಿ ಉದ್ಘಾಟನೆಯ ಪ್ಲೆಕ್ಸ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯನ ಫೋಟೋನೂ ಇಲ್ಲ, ಹೆಸರು ಇಲ್ಲ..!!!!!|Ripponpet

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ವಾರ್ಡ್ ನಲ್ಲಿ ಶನಿವಾರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೆರವೇರಿಸಿದ  ಸಂಪರ್ಕ ರಸ್ತೆ ಡಾಂಬರೀಕರಣ ಕಾಮಗಾರಿ ಗುದ್ದಲಿಪೂಜೆಯ ಸಂದರ್ಭದಲ್ಲಿ ವಾರ್ಡ್ ನ ಸದಸ್ಯ ಗಣಪತಿ ಪೋಟೋವನ್ನು ಪ್ಲೆಕ್ಸ್ ನಲ್ಲಿ ಹಾಕದೇ ನಿರ್ಲಕ್ಷಿಸಿದ್ದಾರೆಂದು ಅರೋಪಿಸಿ ಇಂದು ಗ್ರಾಮ ಪಂಚಾಯ್ತಿ ಕಛೇರಿ ಎದುರು ಗಾಂಧಿ ಭಾವಚಿತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿತ ಸದಸ್ಯರು ಪ್ರತಿಭಟನೆ ನಡೆಸಿದರು. ಗವಟೂರು ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿ ಇಬ್ಬರು, ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಚುನಾವಣೆಯಲ್ಲಿ…

Read More

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ   ಹೊಸನಗರ : ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜು ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 100 ಫಲಿತಾಂಶದ ಸಾಧನೆ ಮಾಡಿ ಪಟ್ಟಣದ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಗರಿ ಮೂಡಿಸಿದೆ. ವಿಜ್ಞಾನ ವಿಭಾಗದಲ್ಲಿ 36 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು, ಹಾಗೂ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲರೂ ಉತ್ತಮವಾಗಿ ಪರೀಕ್ಷೆ ಎದುರಿಸಿ ಶಾಲೆಗೆ…

Read More

ಮುಂದುವರಿದ ಭಾರಿ ಮಳೆ : ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ(12-07-2022) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 12ರ ಮಂಗಳವಾರದಂದು ರಜೆ ಘೋಷಿಸಲಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Read More

Accident | ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತಿದ್ದ ಕಾರು ಅಪಘಾತ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದ್ದ ಕಾರು ಅಪಘಾತ ಶಿವಮೊಗ್ಗ : ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತವಾಗಿದ್ದು, ಲಾರಿ ಕಾರನ್ನು ತೀವ್ರವಾಗಿ ಉಜ್ಜಿಕೊಂಡಿದೆ. ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ…

Read More

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ Shivamogga court sentences a 48-year-old man to life imprisonment and imposes a ₹30,000 fine for the 2023 murder of a 60-year-old woman over a property dispute in Suttukote village. ಶಿವಮೊಗ್ಗ, ಜೂನ್ 25: ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ…

Read More