Headlines

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ತೀರ್ಥಹಳ್ಳಿಯಲ್ಲಿ ಜೋಡಿ ಕೊಲೆ – ಓರ್ವನ ಬಂಧನ|murder

ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ಧಾರೆ.  ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ.   ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು,   ಕೆಲವೇ ದಿನದಲ್ಲಿ ಸಮುದಾಯ ಭವನ ಉದ್ಘಾಟನೆಯಾಗಬೇಕಿದ್ದು, ಅದರ ನಡುವೆ ಸಮುದಾಯದ ಭವನದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ  ಕುಡಿದ ಮತ್ತಿನಲ್ಲಿ ಮೂವರು ಕಾರ್ಮಿಕರ…

Read More

ಡಿ ಕೆ ಸುರೇಶ್ ನಿವಾಸದಲ್ಲಿ ಶಾಸಕರು ಹಾಗೂ ಆಪ್ತರೊಂದಿಗೆ ಡಿಕೆಶಿ ಸಮಾಲೋಚನೆ – ಬೇಳೂರು ,ಆರ್ ಎಂ ಮಂಜುನಾಥ್ ಗೌಡ ಭಾಗಿ|DK

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂಸದ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರು ಹಾಗೂ ಆಪ್ತರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಕೆಪಿಸಿಸಿ ಸಹಕಾರ ವಿಭಾಗದ ಕಾರ್ಯಾಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಸಿ.ಕೆ ವೀರೇಂದ್ರ ಪಪ್ಪಿ, ಡಾ.ರಂಗನಾಥ್, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್. ಪರಿಷತ್ ಸದಸ್ಯ ಎಸ್.ರವಿ ಸೇರಿ ಕೆಲವು ಆಪ್ತರ ಜೊತೆ ಡಿ.ಕೆ…

Read More

ನವೋದಯ ‘ಪ್ರಥಮ PUC’ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ : ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ ಶಿವಮೊಗ್ಗ : 2023-24 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ…

Read More

ರಿಪ್ಪನ್‌ಪೇಟೆ : ಆಟೋ ಮತ್ತು ಬೈಕ್‌ನಡುವೆ ಭೀಕರ ಅಪಘಾತ – ಓರ್ವನ ಸ್ಥಿತಿ ಗಂಭೀರ : ರಕ್ತದ ಮಡುವಿನಲ್ಲಿ ಸಹಾಯಕ್ಕೆ ಅಂಗಲಾಚಿದ ಗಾಯಾಳು|Accident

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆ ಬಳಿ ಬೈಕ್ ಹಾಗೂ ಲಗೇಜ್ ಆಟೋ ಭೀಕರ ಅಪಘಾತವಾಗಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೆಂಡರ್ (KA 01 S 8450) ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ಅಪಘಾತ…

Read More

ಸಿಟಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ – ರೊಚ್ಚಿಗೆದ್ದ ಜನರಿಂದ ಬಸ್ ಗ್ಲಾಸ್ ಗೆ ಕಲ್ಲು ತೂರಾಟ|Accident

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಸಿಟಿ ಬಸ್ಸೊಂದು ಸಿಗ್ನಲ್‌ ಜಂಪ್‌ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ‌ ಕಾಲ ಟ್ರಾಫಿಕ್…

Read More

ಮಧು ಬಂಗಾರಪ್ಪ ನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ|congress

ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಕಂದಾಯ ಇಲಾಖೆಯ ಜವಾಬ್ದಾರಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡು ಭಾಗಗಳ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ಸಮಸ್ಯೆ ಬಗ್ಗೆ ಬಂಗಾರಪ್ಪ,ಕಾಗೋಡು ತಿಮ್ಮಪ್ಪ ನಂತರದಲ್ಲಿ ಹೆಚ್ಚಿನ ಅರಿವು ಇರುವ ಮಧು ಬಂಗಾರಪ್ಪ ರವರನ್ನು ಉಪಮುಖ್ಯಮಂತ್ರಿ ಮಾಡುವುದರೊಂದಿಗೆ ಕಂದಾಯ ಇಲಾಖೆಯ ಜವಬ್ದಾರಿ ನೀಡಬೇಕು ಎಂದರು. ಮಲೆನಾಡು ಭಾಗದಲ್ಲಿ…

Read More

ಕಾರು ಅಪಘಾತ – ಹೊಸನಗರ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ಸ್ಥಳದಲ್ಲೇ ಸಾವು|accident

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ತುರುಕೋಡು ನಾಗರಾಜ್ ಗೌಡ (55) ಎಂದು ಗುರುತಿಸಲಾಗಿದೆ.  ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ ಇಂದು ಮಧ್ಯಾಹ್ನ ಗೌತಮಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹೊಸನಗರ ತಾಲೂಕಿನ ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ…

Read More

ನೂತನ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು – ಸಮುದಾಯ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕನಸು ಈಡೇರುವುದೇ???? GKB

ನೂತನ ಶಾಸಕರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು ರಿಪ್ಪನ್‌ಪೇಟೆ : ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ರಿಪ್ಪನ್‌ಪೇಟೆ ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪಶು ಅಸ್ಪತ್ರೆಯ ವೈದ್ಯಾಧಿಕಾರಿಗಳ ಸಿಬ್ಬಂದಿಗಳ ಮತ್ತು ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸುವುದು ಶಾಶ್ವತ ಸುಸಜ್ಜಿತ ಬಸ್ ನಿಲ್ದಾಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯಿತ್‌ನ್ನಾಗಿ ಮೇಲ್ದರ್ಜೇಗೇರಿಸುವುದು ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಎದುರಾಗಿರುವ ಪ್ರಮುಖ ಸವಾಲುಗಳು….

Read More

ಹೊಸನಗರ : ಬಾಲಕಿಯನ್ನು ಅಡ್ಡಗಟ್ಟಿ ನಂಬರ್ ಕೊಡುವಂತೆ ಕಿರುಕುಳ – ಇಬ್ಬರು ವಶಕ್ಕೆ|Crime News

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪೊಲೀಸ್ ಸ್ಟೇಷನ್​ ಒಂದರಲ್ಲಿ ಅಪ್ತಾಪ್ತೆಯೊಬ್ಬಳನ್ನ ಅಡ್ಡಗಟ್ಟಿ ಫೋನ್ ನಂಬರ್ ಕೇಳಿ ಕಿರುಕುಳ ನೀಡಿದ ಆರೋಪ ಸಂಬಂಧ ಕೇಸ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ  ಓದುತ್ತಿರುವ ಅಪ್ರಾಪ್ತೆಯೊಬ್ಬರು ಹೊಸನಗರ ತಾಲ್ಲೂಕಿನ ಗ್ರಾಮವೊಂದರಲ್ಲಿರುವ ತಮ್ಮ ಅಜ್ಜಿ ಮನೆಗೆ ಬಂದಿದ್ದಾರೆ. ಕಳೆದ ಭಾನುವಾರ ಚರ್ಚ್​ವೊಂದರಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗುವಾಗ ಇಬ್ಬರು ಆಕೆಯನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ಧಾರೆ.   ಅಲ್ಲದೆ  ಬೈಕ್‌ನಲ್ಲಿ ಬಂದ ಆರೋಪಿಗಳು ಬಾಲಕಿಯನ್ನು  ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ…

Read More