Headlines

ರಿಪ್ಪನ್‌ಪೇಟೆ : ಸಾಲಭಾದೆಗೆ ಬೇಸತ್ತು ಜಮೀನಿನಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗೌಡಕೊಪ್ಪ ಗ್ರಾಮದ ರೈತನೊಬ್ಬ ಸಾಲಭಾದೆಗೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ(55) ಎಂಬುವವರು ಸಾಲಭಾದೆಗೆ ಹೆದರಿ ತಮ್ಮ ಸ್ವಂತ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ ರವರಿಗೆ ಮನೆ ಹಿಂಬದಿಯಲ್ಲಿಯೇ ಒಂದೂವರೆ ಎಕರೆ ಜಮೀನು ಇದ್ದು ಅದರಲ್ಲಿಯೇ ಸಾಗುವಳಿ ಮಾಡಿಕೊಂಡು ಬರುತ್ತಿದ್ದು ಸದರಿ ಜಮೀನಿನ ಆಧಾರದ ಮೇಲೆ…

Read More

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಗ್ರಾಪಂ ಅಧ್ಯಕ್ಷರಾಗಿದ್ದ ಉಬೇದುಲ್ಲಾ ಷರೀಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

ರಾತ್ರೋರಾತ್ರಿ ಶಿವಮೊಗ್ಗದ ಮುನೇಶ್ವರ ದೇವಸ್ಥಾನದ ಬೀಗ ಒಡೆದು ಕಳ್ಳತನ :

ಶಿವಮೊಗ್ಗ :ಇಲ್ಲಿನ ತುಂಗಾ ನದಿ ತೀರದಲ್ಲಿರುವ ಅಪ್ಪಾಜಿರಾವ್ ಕಾಂಪೌಂಡ್’ನ  ಮುನೇಶ್ವರ ದೇವಸ್ಥಾನಲ್ಲಿ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ದೇಗುಲದ ಬೀಗ ಒಡೆದು ಕಳವು ಮಾಡಿದ್ದಾರೆ. ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಅಭರಣ, ನಗದು ದೋಚಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆ ಕಾರ್ಯ ಆರಂಭಿಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ ಆಡಳಿತ ಮಂಡಳಿಯವರು ಬೀಗ ಹಾಕಿ ತೆರಳಿದ್ದರು. ರಾತ್ರಿ ಕಳ್ಳರು ದೇಗುಲದ ಬೀಗು ಮುರಿದಿದ್ದಾರೆ. ಒಳಗಿದ್ದ ಎರಡು ಗಾಡ್ರೇಜ್ ಬೀರುವಿನ ಬೀಗಗಳನ್ನು ಒಡೆದಿದ್ದಾರೆ. ದೇವಸ್ಥಾನದ…

Read More

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ  ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ  ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ  ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…

Read More

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ  ಚುಚ್ಚಿ  ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ  ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ  ವಸೀಂ ಅಕ್ರಂ  ಅಲಿಯಾಸ್  ಉಂಗ್ಲಿ (೨೦),  ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್  ಕಾಲಾ ವಸೀಂ (೨೦)   ಮತ್ತು  ಮುರಾದ್‌ನಗರದ…

Read More

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More

Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.  ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…

Read More

ತುಂಗಾ ನದಿಯಲ್ಲಿ ಯುವಕನೊಬ್ಬ ನೀರುಪಾಲು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ

ತುಂಗಾ ನದಿಯಲ್ಲಿ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಳೆ ಬಸ್ ಸ್ಟ್ಯಾಂಡ್  ಬಳಿ 25 ರಿಂದ 30 ವರ್ಷ ಅಸುಪಾಸಿನ ಯುವಕ ನೀರಿಗೆ ಹಾರಿರುವುದಾಗಿ ಕೆಲವರು ಹೇಳಿದರೆ ಇನ್ನು ಕೆಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಹೇಳುತಿದ್ದು,ಸ್ಪಷ್ಟ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಆತನ ಶೋಧಕಾರ್ಯಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧಕಾರ್ಯ ಆರಂಭಿಸಿದ್ದಾರೆ.  ಸಂತೋಷ್ ಎಂಬ 27 ವರ್ಷದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದವನು ಎಂದು ಹೇಳಲಾಗುತ್ತಿದೆ. ಪುರಲೆ ನಿವಾಸಿಯವನು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More
Exit mobile version