Headlines

ಮಹಿಳೆಯ ಮಾಂಗಲ್ಯ ಸರ ಅಪಹರಣ

ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…

Read More

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ 110/33/11ಕೆ.ವಿ. ಸಾಗರ ವಿ.ವಿ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನಲೆಯಲ್ಲಿ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 10.03.2024 ರಂದು ಬೃಹತ್ ಕಾಮಗಾರಿ ವಿಭಾಗ, ಶಿವಮೊಗ್ಗ ಇವರು ರೇಲ್ವೆ ಟ್ರ್ಯಾಕ್ಷನ್ ಕಾಮಗಾರಿಗೆ ಸಂಬಂಧಿಸಿದಂತೆ ಹೊಸದಾಗಿ ನಿರ್ಮಿಸುತ್ತಿರುವ 110 ಕೆವಿ ಮಾರ್ಗವನ್ನು 110 ಕೆವಿ ಬಸ್ ಬಾರ್ ಗೆ ಜೋಡಿಸುವ ಕಾಮಗಾರಿಯ…

Read More

ಕಾರು ಡಿಕ್ಕಿಯಾಗಿ ಜಿಂಕೆ ಸಾವು|deer

ಶಿವಮೊಗ್ಗ ಜಿಲ್ಲೆಯ ಚೋರಡಿ ಸಮೀಪ ಭಾನುವಾರ ಸಂಜೆ ವಾಹನಕ್ಕೆ ಡಿಕ್ಕಿಯಾಗಿ ಜಿಂಕೆಯೊಂದು ಸಾವಿಗೀಡಾದ ಘಟನೆ ನಡೆದಿದೆ.  ಬಿ.ಹೆಚ್.ರಸ್ತೆಯ ಕುಮದ್ವತಿ ಸೇತುವೆಗೆ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗ ಕಡೆ ಬರುತಿದ್ದ ಇನ್ನೋವಾ ಕಾರಿಗೆ ವೇಗವಾಗಿ ರಸ್ತೆ ದಾಟುತಿದ್ದ ಗಂಡು ಜಿಂಕೆಯೊಂದು ಡಿಕ್ಕಿ ಹೊಡೆದಿದೆ. ಚಾಲಕನ ಗಮನಕ್ಕೆ ಬಾರದೆ ಏಕಾಏಕಿ ರಸ್ತೆ ದಾಟಿದ ಜಿಂಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ. …

Read More

ಪ್ರಧಾನಿ ಮೋದಿಗೆ ಗುಂಡಿಕ್ಕಿ ಎಂದಿದ್ದ ಬೇಳೂರಿಗೆ ನೀವು ಮತ ಹಾಕುತ್ತೀರಾ – ಹರತಾಳು ಹಾಲಪ್ಪ|Political-news

ರಿಪ್ಪನ್‌ಪೇಟೆ : ಕಳೆದ ಚುನಾವಣೆಯ ಸಂದರ್ಭದ ದೇಶದ ಪ್ರಧಾನಿ ಮೋದಿಯವರಿಗೆ ಗುಂಡಿಕ್ಕಿ,ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬವನ್ನು ಜೈಲಿಗೆ ಕಳುಹಿಸಿ ಎಂದಿದ್ದ ಇದೇ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈಗ ಯಡಿಯೂರಪ್ಪನವರಂತಹ ಪುಣ್ಯಾತ್ಮ ಎಂದು ಮತದಾರರ ಮುಂದೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆ ಅಂತವರಿಗೆ ನೀವು ಮತ ಹಾಕುತ್ತೀರಾ ಎಂದು ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಾಳೂರು-ಕೆಂಚನಾಲ-ಅರಸಾಳು-ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದೊಂದಿಗೆ ಮನೆಮನೆಗೆ ಭೇಟಿ ಸಂದರ್ಭದಲ್ಲಿ ಅರಸಾಳು ಗ್ರಾಮದಲ್ಲಿ…

Read More

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ ಹಣಕೊಡುವುದಾಗಿ ನಂಬಿಸಿ ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿದ ಪ್ರಕರಣದಲ್ಲಿ ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ತೀರ್ಪು ನೀಡಿ ಆದೇಶಿಸಿದೆ. ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ  ಮಂಜುನಾಥ್ ನಾಯಕ್ ರವರು ದಿನಾಂಕಃ 13-09-2024 ರಂದು  ಆರೋಪಿತನಾದ ಹಯಾತ್ ಸಾಬ್, 31 ವರ್ಷ,…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಇಎನ್‌ ಅಪರಾಧ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಮೊಹಮ್ಮದ್‌ ಮುಜೀಬ್ (23), ಹಜರತ್ ಉಸ್ಮಾನ್ (26), ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಲ್ಮಾನ್ ಇ.(28) ಹಾಗೂ ಶಿಕಾರಿಪುರದ ಜಟ್‌ಪಟ್‌ ನಗರದ ಮೊಹಮ್ಮದ್‌ ಕೈಫ್‌ (21) ಬಂಧಿತರು. ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದ…

Read More
Exit mobile version