Headlines

ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :

ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ  ಮಹಿಳೆಯ ಮಾಂಗಲ್ಯ ಸರ  ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…

Read More

ರಿಪ್ಪನ್‌ಪೇಟೆ ಜಿಪಂ ಮತ್ತು ಹೊಸನಗರ ಜಿಪಂ ಕ್ಷೇತ್ರ ಮರುವಿಂಗಡಣೆ ಫ಼ುಲ್ ಕನ್ಫ್ಯೂಸ್ – ಪಟ್ಟಿ ಇಲ್ಲಿದೆ ನೋಡಿ|ZP

ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಪ್ರಕಟಿಸಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು 31ಕ್ಕೆ ಸೀಮಿತಗೊಳಿಸಿದೆ. 2021ರಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಮಾಡಲಾಗಿತ್ತು. ಆಗ 5 ಕ್ಷೇತ್ರಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿತ್ತು.  ಸದ್ಯ ರಿಪ್ಪನ್‌ಪೇಟೆ ಹಾಗೂ ಹೊಸನಗರ ಜಿಪಂ ಸೀಮಾ ಗಡಿ ಗೊಂದಲಮಯವಾಗಿದ್ದು ಎತ್ತಣ ಮಾಮರ ಎತ್ತಣದ ಕೋಗಿಲೆ ಎಂಬಂತೆ ರಿಪ್ಪನ್ ಪೇಟೆ ಜಿಪಂ ಕ್ಷೇತ್ರವು ಸಾಗರ ಸಮೀಪದ ಹೆಬ್ಬೈಲು ಗ್ರಾಮಕ್ಕೆ ತಗುಲಿಕೊಂಡಿದ್ದು…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ :  ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…

Read More

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ ಗ್ರಾಮೀಣ ಭಾಗದ ಜನತೆಗೆ ಗ್ರಾಪಂ ಕಟ್ಟಡವೇ ವಿಧಾನ ಸೌಧ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಸರಕಾರಿ ಅಧಿಕಾರಿಗಳು ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೆದ್ದಾರಿಪುರ ಗ್ರಾಮ ಪಂಚಾಯತ್ ಕಛೇರಿಯ ಮೊದಲನೆ ಮಹಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ…

Read More

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಮಾರುತಿ ಸುಜುಕಿ ಕಾರ್ ನ ಅಧಿಕೃತ ಡೀಲರ್ ಶ್ರುತಿ ಮೋಟಾರ್ಸ್ ರವರ ನೂತನ ಶೋರೂಂ ಹೊಸನಗರ ಪಟ್ಟಣದಲ್ಲಿ ನಾಳೆ (ಗುರುವಾರ) ಶುಭಾರಂಭಗೊಳ್ಳಲಿದೆ. ಹೊಸನಗರ ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶ್ರುಯಿ ಅರೆನಾ ಮೋಟಾರ್ಸ್ ರವರ ನೂತನ ಶಾಖೆ ನಾಳೆ ಬೆಳಿಗ್ಗೆ 08 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

Read More

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ :  ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…

Read More

ಬಿಜೆಪಿಯ ಏಜೆಂಟ್ ರೀತಿ ಕಾರ್ಯ ನಿರ್ವಹಿಸುತ್ತಿರುವ ನಾಗೇಶ್ ಡೋಂಗ್ರೆ ಯನ್ನು ಕೂಡಲೇ ವಜಾ ಮಾಡಿ : ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಾಗೇಶ್ ಡೋಂಗ್ರೆ ಎಂಬ ಭ್ರಷ್ಟ ಅಧಿಕಾರಿ ಸೇರಿಕೊಂಡಿದ್ದು, ಈತನನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ನಾಗೇಶ್ ಡೋಂಗ್ರೆ ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾನೆ. ಡಿಸಿಸಿ ಬ್ಯಾಂಕ್ ನ ನಿರ್ದೇಶಕರನ್ನು ವಜಾ ಮಾಡಲು ಹೊರಟಿದ್ದಾನೆ. ಹಾಲು ಒಕ್ಕೂಟದ ಚುನಾವಣೆಯಲ್ಲಿ ಮಾಡಲೇ ಇಲ್ಲ. ಈ ಹಿಂದೆ ಈತನ ಮೇಲೆ ಭ್ರಷ್ಟಾಚಾರದ ಆರೋಪ ಕೂಡ ಇದೆ. ಮುಂಬಡ್ತಿ…

Read More

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.  ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More