Headlines

ಆಗುಂಬೆ ಘಾಟಿಯಲ್ಲಿ ಹೊತ್ತಿ ಉರಿದ ಕಾರು !

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿ ಪ್ರಾರಂಭದ  ಸೂರ್ಯಾಸ್ತಮ ವ್ಯೂ ಹತ್ತಿರ ಸಂಜೆ 5-15ರ  ಸುಮಾರಿಗೆ  ಡಸ್ಟರ್ ಕಾರ್ ನಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ. ಕಾರಿನಲ್ಲಿದ್ದವರು ಸದ್ಯ ಪಾರಾಗಿದ್ದಾರೆ. ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗುಂಬೆ ಘಾಟಿಯ ಮೊದಲ ತಿರುವಿನಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಅರವಿಂದ್ ಎಂಬುವವರು ಕಾರ್ಕಳದಲ್ಲಿ ಈ ಕಾರನ್ನು ಖರೀದಿಸಿದ್ದರು. ಇವತ್ತು ಕಾರನ್ನು ಖರೀದಿಸಿ ಶಿವಮೊಗ್ಗಕ್ಕೆ ತರುತ್ತಿದ್ದರು.ಕಾರಿನಲ್ಲಿ ಅರವಿಂದ್ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮೂವರು…

Read More

ರಿಪ್ಪನ್ ಪೇಟೆ : ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ ಎಂಬ ಬಾಲಿಷ ಹೇಳಿಕೆ ನೀಡಿರುವ ದೇಶದ ಗೃಹ ಮಂತ್ರಿ ಅಮಿತ್ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವತಿಯಿಂದ ರಾಷ್ಟ್ರಪತಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇತ್ತೀಚೆಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಷಾ ಟಿವಿ ಸಂದರ್ಶನವೊಂದರ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…

Read More

ಜಾನಪದ ಕಲೆಯನ್ನು ಶಾಶ್ವತವಾಗಿ ಉಳಿಸಬೇಕಿದೆ: ಕಾಗೋಡು ತಿಮ್ಮಪ್ಪ

ರಿಪ್ಪನ್‌ಪೇಟೆ: ನಮ್ಮ ಪೂರ್ವಜನರ ಜೀವನದಲ್ಲಿ ಹಾಸುಹೊಕ್ಕಾಗಿದ್ದ ಜಾನಪದ ಕಲೆ, ಸಾಹಿತ್ಯ ಪ್ರಕಾರಗಳು ಸರ್ವಕಾಲಕ್ಕೂ ಜನಮಾನಸದಲ್ಲಿ ಶಾಶ್ವತವಾಗಿ ಉಳಿಸುವ ಜವಾಬ್ದಾರಿಯನ್ನು ಇಂದಿನ ಯುವ ಪೀಳಿಗೆ ನಿರ್ವಹಿಸಬೇಕಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಕೆಂಚನಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಶ್ರೀಶನಿಪರಮೇಶ್ವರ ಯುವಕ ಸಂಘ, ಜಾನಪದ ಕಲಾ ಹಾಗೂ ಸಾಹಿತ್ಯ ವೇದಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪುನಿತ್ ರಾಜ್‌ಕುಮಾರ್ ಸ್ಮರಣಾರ್ಥ ಸೋಮವಾರ ಸಂಜೆ ಆಯೋಜಿಸಲಾಗಿದ್ದ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮತ್ತು ಶಿಕ್ಷಕ…

Read More

2 ಕೆಜಿ ಗಾಂಜಾ ಸಹಿತ ಆರೋಪಿಗಳು ಅರೆಸ್ಟ್! ಗಡಿಪಾರಾದ ರೌಡಿಶೀಟರ್ ನಿಂದ ಆಂಧ್ರದ ಗಾಂಜಾ ಜಿಲ್ಲಾದ್ಯಂತ ಸಪ್ಲೈ..!!???

ಶಿವಮೊಗ್ಗ ಪೊಲೀಸರು ಗಾಂಜಾ ವಿಚಾರದಲ್ಲಿ ಇವತ್ತು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಸಿಟಿ ಲಿಮಿಟ್​ನಲ್ಲಿಯೇ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 2 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ಧಾರೆ.  ಶಿವಮೊಗ್ಗ ನಗರದ ಎಂ.ಆರ್.ಎಸ್. ನಿಂದ  ವಡ್ಡಿನಕೊಪ್ಪದ ಕಡೆಗೆ ಹೋಗುವ ರಸ್ತೆಯ  ಸಮೀಪ ಇರುವ ಕೆಇಬಿ ಖಾಲಿ ಜಾಗದಲ್ಲಿ ಕೆಲವರು ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ  ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ  ಪ್ರಭು ಡಿ.ಟಿ ನೇತ್ರತ್ವದಲ್ಲಿ ಸಿಇಎನ್ ಕ್ರೈಂ ಪೊಲೀಸ್ ಠಾಣೆ ದೀಪಕ್, ಎಂ.ಎಸ್ ಟೀಂ …

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ – ಸಂಚಾರದಲ್ಲಿ ವ್ಯತ್ಯಯ |Rain – storm

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ  ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು.  ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read More

ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!

ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ…

Read More

ಹೊಸನಗರ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ – ಕಾರು ಜಪ್ತಿ , ಆರೋಪಿ ಪರಾರಿ!!????|EXCISE

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ನಿವಣೆ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡಿದ್ದು ಆರೋಪಿ ಪರಾರಿಯಾಗಿದ್ದಾನೆ‌. ನಿವಣೆ ಗ್ರಾಮದ ಅಗಸನಗದ್ದೆ ಸಮೀಪ ಅಕ್ರಮವಾಗಿ ಓಮ್ನಿ ವಾಹನದಲ್ಲಿ ಸುಮಾರು 198.72 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿಯ ಅಬಕಾರಿ ನಿರೀಕ್ಷಕರಾದ ಅಮಿತ್‌ಕುಮಾರ್‌ರವರ ನೇತೃತ್ವದಲ್ಲಿ ಅಕ್ರಮ ಮದ್ಯ ಹಾಗೂ…

Read More