Headlines

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ |PSI

ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ…

Read More

ಶಿವಮೊಗ್ಗ: ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ :ಕಾರು ಚಾಲಕ ಸ್ಥಳದಲ್ಲೆ ಸಾವು

ಶಿವಮೊಗ್ಗ: ಖಾಸಗಿ ಬಸ್ ಮತ್ತು ಕಾರ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ಶಿವಮೊಗ್ಗದ ಕುಂಚೇನಹಳ್ಳಿ ಸಮೀಪ ನಡೆದಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿಕಾರಿಪುರ ನಿವಾಸಿ ರಾಕೇಶ್ (35) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನಿಬ್ಬರು ಸಹ ಪ್ರಯಾಣಿಕರಾದ ಜ್ಯೋತಿ ಮತ್ತು ಚೈತ್ರರಿಗೆ ಅಪಘಾತದಲ್ಲಿ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಸಿಫ್ಟ್ ಕಾರಿನಲ್ಲಿ ಬರುವಾಗ ಕುಂಚೇನ ಹಳ್ಳಿಯ ಗ್ರಾಪಂ ಕಚೇರಿ ಮುಂಭಾಗ ಕೃಷ್ಣ…

Read More

ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು?

Questions arise over police procedure in the Anandapur case as counter-complaints, SC/ST Act allegations, and delayed FIR registration trigger demands for a fair investigation. ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು? ಮರಳು ಮಾಫ಼ಿಯಾ ದಾಂಧಲೆ ಪ್ರಕರಣಕ್ಕೆ ಟ್ವಿಸ್ಟ್ : ದಲಿತ ಸಂಘರ್ಷ ಸಮಿತಿಯಿಂದ ಪೊಲೀಸರ ವಿರುದ್ಧ ಗಂಭೀರ ಆರೋಪ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಣೆ ದೂರು…

Read More

ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿ : ಅಡಿಕೆ ತೋಟಕ್ಕೆ ಹಾನಿ

ರಿಪ್ಪನ್ ಪೇಟೆ : ಮೂಗೂಡ್ತಿ ಅರಣ್ಯ ಜೀವಿ ವಲಯ ವ್ಯಾಪ್ತಿಯ ತಳಲೆ ಗ್ರಾಮದ ಕಾರೆಹೊಂಡ ದಲ್ಲಿರುವ ರೈತರ ಅಡಿಕೆ ತೋಟಕ್ಕೆ ಮಂಗಳವಾರ ರಾತ್ರಿ ಆನೆಯೊಂದು ದಾಳಿ ನಡೆಸಿ ಅಡಿಕೆ ತೋಟ ಹಾನಿಗೊಳಿಸಿದ ಘಟನೆ ನಡೆದಿದೆ. ರೈತ ಪರಶುರಾಮ ಎಂಬವರ ಅಡಿಕೆ ತೋಟಕ್ಕೆ ದಾಳಿ ಮಾಡಿದ ಆನೆಯು ತೆಂಗು ಹಾಗೂ ಅಡಿಕೆ ಮರಗಳನ್ನು ಕಿತ್ತು ಮುರಿದು ಹಾನಿಗೊಳಿಸಿ ರೈತರಿಗೆ ನಷ್ಟವನ್ನುಂಟು ಮಾಡಿದೆ.ಅನಾಹುತದ ಘಟನೆಯನ್ನು ತಿಳಿದ ಗ್ರಾಮಸ್ಥರು ತೋಟಕ್ಕೆ ಆಗಮಿಸಿ ಇದುವರೆಗೆ ಈ ಭಾಗದಲ್ಲಿ ಆನೆ ಬಂದಿರುವ ನಿದರ್ಶನ ಇರಲಿಲ್ಲ…

Read More

ರಿಪ್ಪನ್ ಪೇಟೆಯ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೊರ್ವ ವ್ಯಕ್ತಿ ಸಾವು:

ರಿಪ್ಪನ್ ಪೇಟೆ:ಇಂದು ಮಧ್ಯಾಹ್ನ ಮೂಗೂಡ್ತಿ ಸಮೀಪ  ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ  ಓರ್ವ ಮಹಿಳೆ ಮೃತ ಪಟ್ಟಿದ್ದರು.ಉಳಿದ ಮೂವರ ಸ್ಥಿತಿ ಗಂಭೀರವಾಗಿತ್ತು, ಇದೀಗ ಶಿವಮೊಗ್ಗದ  ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೊರ್ವ ವ್ಯಕ್ತಿ ವಿಜೇಂದ್ರ ಭಂಡಾರಿ (60) ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಜೇಂದ್ರ ಭಂಡಾರಿ (60) ರಿಪ್ಪನ್ ಪೇಟೆಯ ಸಮೀಪದ ದೂನ ಮೂಲದ ನಿವಾಸಿಯಾಗಿದ್ದಾರೆ. ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ…

Read More

ಪುನೀತ್ ರಾಜ್‍ಕುಮಾರ್ ಗೆ ಶ್ರದ್ದಾಂಜಲಿ : ರಿಪ್ಪನ್ ಪೇಟೆ ಸಂಪೂರ್ಣ ಬಂದ್

ರಿಪ್ಪನ್​​​​ಪೇಟೆ : ಪುನೀತ್ ರಾಜ್​ಕುಮಾರ್ ಅಗಲಿಕೆಯಿಂದ ಇಡೀ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದೆ. ಈ ನಡುವೆ ರಿಪ್ಪನ್​​ಪೇಟೆ ನಗರ ಸಂಪೂರ್ಣ ಬಂದ್ ಆಗಿದೆ. ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಬಂದ್ ಮಾಡಿದ್ದು, ಪಟ್ಟಣ ಖಾಲಿ ಖಾಲಿಯಾಗಿದೆ. ಪಟ್ಟಣದ ಸರ್ಕಲ್​​​​​ನಲ್ಲಿ ಪುನೀತ್ ರಾಜ್​​ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಲಾಗಿದೆ. ಪಟ್ಟಣದ ಮೆಡಿಕಲ್ ಶಾಪ್​​​ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಬಂದ್ ಮಾಡಲಾಗಿದ್ದು, ಕೇವಲ ಬೆರಳೆಣಿಕೆಯ ಬಸ್​​ ಸಂಚಾರ ಮಾಡುತ್ತಿವೆ. ಕನ್ನಡ ಚಲನಚಿತ್ರರಂಗದ ಮೇರುನಟ ಪವರ್ ಸ್ಟಾರ್ ಪುನೀತ್…

Read More

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga  ಕಾಂಗ್ರೆಸ್‌ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ  ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….

Read More

Home guard | ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ.!!

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ… ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್‌ಪೇಟೆಯಲ್ಲಿ 11 ಹುದ್ದೆ , ಹೊಸನಗರದಲ್ಲಿ 11 ಹುದ್ದೆ ಸೇರಿದಂತೆ ಜಿಲ್ಲಾದ್ಯಂತ ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ…

Read More

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ ಹೊಂಬುಜ (ಮಾ.14): ಪಾರಂಪರಿಕ ಜಿನಾಗಮೋಕ್ತ ಶಾಸ್ತದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ವಿವಿಧ ಆರಾಧನೆಗಳು, ನಾಗವಾಹನೋತ್ಸವ, ಸಿಂಹವಾಹನೋತ್ಸವ, ಬೆಳ್ಳಿ ರಥೋತ್ಸವ, ಪುಷ್ಪರಥೋತ್ಸವ, ಬಲಿ ಉತ್ಸವಾದಿಗಳು ಸಾಂಗವಾಗಿ ಪೂರ್ವಪರಂಪರೆಯಂತೆ ನೆರವೇರಿತು….

Read More

ಬಸವಣ್ಣನವರ ಬಗ್ಗೆ ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿ ಸರಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮೂಲೆಗದ್ದೇ ಶ್ರೀಗಳ ಪತ್ರ

ಲಿಂಗಾಯಿತ ಧರ್ಮಗುರು ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾವುಗಳು ಹೋರಾಟ ನಡೆಸಬೇಕಾಗುತ್ತದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಬಗ್ಗೆ ರಿಪ್ಪನ್‌ಪೇಟೆಯಲ್ಲಿ ಮಾಧ್ಯಮಗಳಿಗೆ ವಿವರಿಸಿ, 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರನ್ನು ಕುರಿತ ಪಾಠದಲ್ಲಿ ಕೆಲ ಬದಲಾವಣೆ ಮಾಡಿ ಪ್ರಕಟಿಸಿರುವುದನ್ನು ಕುಚೋದ್ಯದ ಸಂಗತಿ. ಈ ಅನೈತಿಕ ತಪ್ಪುಗಳನ್ನು ಸರಿಪಡಿಸಿ ಪ್ರಕಟಿಸಬೇಕು. ಇಲ್ಲದಿದ್ದರೆ…

Read More