Headlines

ಮುಳುಗಡೆ ಸಂತ್ರಸ್ತರಿಗೆ ಹಲವು ದಶಕಗಳಿಂದ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರದ ವಿರುದ್ದ ಶರಾವತಿ ಚಳುವಳಿ : ಆರ್ ಎಂ ಮಂಜುನಾಥ್ ಗೌಡ

ರಿಪ್ಪನ್ ಪೇಟೆ : ಶರಾವತಿ,ವರಾಹಿ,ಚಕ್ರ ಮತ್ತು ಸಾವೇಹಕ್ಲು ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಹೋರಾಟ ಸಮಿತಿಯ ವತಿಯಿಂದ ಹಲವಾರು ದಶಕಗಳಿಂದ ಸೂಕ್ತ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರವು ಕೂಡಲೇ ಅವರಿಗೆ ಪರಿಹಾರ ನೀಡಬೇಕೆಂದು ಮಾಜಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥ್ ಗೌಡ ಆಗ್ರಹಿಸಿದರು. ಇಂದು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ 1962 ರಲ್ಲಿ ಲಿಂಗನಮಕ್ಕಿ ಜಲಾಶಯಕ್ಕಾಗಿ ಶರಾವತಿ ನದಿ ಪಾತ್ರದ 504 ಹಳ್ಳಿಗಳು ಮುಳುಗಡೆಯಾಗಿ ಇಪ್ಪತೈದು ಸಾವಿರ…

Read More

ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ|Ripponpet

“ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ’’ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಅರಿವಿಲ್ಲದಂತಾಗಿದೆ :ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್‌ಪೇಟೆ;- ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಹಾಗೂ  ಸಂಸ್ಕಾರ ಇಲ್ಲದಂತಾಗಿದೆ.ಇತ್ತೀಚಿನ ದಿನಗಳಲ್ಲಿ  ನಾಟಕ ರಂಗಕಲೆ ಜಾನಪದ ತತ್ವ ಪದಗಳಿಂದ ನಮ್ಮ ಕಲೆ ಸಂಸ್ಕೃತಿ ಗಳು ಜೀವಂತವಾಗಿ ಉಳಿದಿದ್ದು ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಕ್ಕಳ ರಂಗ ಹಬ್ಬ ಪ್ರೇರಕವೆಂದು ಮಳಲಿಮಠದ ಡಾ.ಗುರುನಾಗಭೂಷಣ…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More

ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder

ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ‌ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…

Read More

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read More

ಪಾಗಲ್ ಪ್ರೇಮಿಯೊಬ್ಬನ ಕಿರುಕುಳಕ್ಕೆ ಬೇಸತ್ತ ಅಂತಿಮ ಬಿಕಾಂ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ :

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದ ಕುಂಟಿಗೆ ವಾಸಿಯಾದ ವಿದ್ಯಾಶ್ರೀ (21) ಎಂಬ ವಿದ್ಯಾರ್ಥಿನಿ ಪಾಗಲ್ ಪ್ರೇಮಿಯೊಬ್ಬನ ಕಾಟಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಸವೆ ಗ್ರಾಮದ ವಿದ್ಯಾಶ್ರೀ ಹೊಸನಗರ ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಅವಳ ನೆರೆಮನೆಯಾತ  ಶಶಾಂಕ್ ಎಂಬಾತನು ಪ್ರತಿದಿನ ಕಾಲೇಜಿಗೆ ಹೋಗಿ ಬರುವಾಗ ತನ್ನನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ ಹಾಗೂ ಬೆದರಿಕೆ ಹಾಕುತ್ತಿದ್ದನು ಈ ಹಿನ್ನಲೆಯಲ್ಲಿ ಮನನೊಂದ ವಿದ್ಯಾಶ್ರೀ ಕಳೆದ ತಿಂಗಳು ಏಪ್ರಿಲ್…

Read More

ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ – ಮಧು ಬಂಗಾರಪ್ಪ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ‌ ಕಾಂಗ್ರೆಸ್ ಪಕ್ಷ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರು ಹಾಗೂ ಸೊರಬ ವಿಧಾನಸಭಾ ಅಭ್ಯರ್ಥಿಯಾದ ಮಧುಬಂಗಾರಪ್ಪ ಹೇಳಿದರು. ಅವರು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆದ್ದಾರಿಪುರ ಸಮೀಪದ ಕಗ್ಗಲಿಜಡ್ಡು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದ ಶರಾವತಿ ಮುಳುಗಡೆಯಾಗಿ ಅಲ್ಲಿನ ರೈತರು ಮನೆಮಠವನ್ನು ಕಳೆದು ಕೊಂಡ ಸಂತ್ರಸ್ಥರು ಹೆಚ್ಚು ಹೊಸನಗರ…

Read More

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ|theft

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ವಿವಿದೆಡೆ  ಒಣಗಲು ಹಾಕಿದ್ದ 4 ಕ್ವಿಂಟಲ್ ಗೂ ಅಧಿಕ  ರಬ್ಬರ್ ಶೀಟ್ ಗಳನ್ನು ಬುಧವಾರ ರಾತ್ರಿ ಕಳ್ಳರು ಅಪಹರಿಸಿದ್ದಾರೆ. ಬೆಳಂದೂರು ಗ್ರಾಮದ ಬಿ.ಟಿ. ಪ್ರಕಾಶ್ ಅವರ ಮನೆಯಲ್ಲಿ 160 ಕೆ.ಜಿ. ಹಾಗೂ  ಪುಟ್ಟಸ್ವಾಮಿಗೌಡ ಅವರ ಮನೆಯಲ್ಲಿ 150 ಕೆಜಿ  ಕೆ ಜಿ, ತಳಲೆ ಜಾರ್ಜ್ ಅವರ ಮನೆಯಲ್ಲಿ 50 ಕೆಜಿ,ಗವಟೂರು…

Read More