ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ಪ್ರಕರಣ : ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದ್ದಕ್ಕೆ ಪೆಟ್ರೋಲ್ ಬಂಕ್ ಗೆ ಕಲ್ಲು ಹೊಡಿತೀರಾ – ಬೇಳೂರು ಗೋಪಾಲಕೃಷ್ಣ ವಾಗ್ದಾಳಿ|GKB
ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ನೂರರ ಗಡಿ ದಾಟಿದೆ. ಈಗ ಪೆಟ್ರೋಲ್ ಬಂಕ್ ಮೇಲೆ ಬಿಜೆಪಿಯವರು ಕಲ್ಲು ಹೊಡಿತಾರಾ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ಸರ್ಕಾರ ಹೋಗಿದೆ.ಕಾಂಗ್ರೆಸ್ ಸರ್ಕಾರ ಬಂದಿದೆ.ಹಾಗಾಗಿ ಬಿಜೆಪಿಯವರು ಹತಾಶರಾಗಿದ್ದಾರೆ ಎಂದು ಹೇಳಿದರು. ಬಿಜೆಪಿಯವರು ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ರಲ್ಲಾ, ನಾವು ಕಲ್ಲೂ ತೂರಾಟ ಮಾಡಿಲ್ಲ. ಹೋರಾಟಾನು ಮಾಡಿಲ್ಲ ಎಂದ ಅವರು,ಈಗ ಪೆಟ್ರೋಲ್- ಡಿಸೇಲ್…