Headlines

EXIT POLL | ರಾಜ್ಯದಲ್ಲಿ ಅತಂತ್ರ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ನಾಲ್ಕು ಸಮೀಕ್ಷೆಗಳು – ಐದು ಸಮೀಕ್ಷೆಗಳಲ್ಲಿ ಯಾವ ಪಾರ್ಟಿಗೆ ಎಷ್ಟು ಸ್ಥಾನ??? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಅತಂತ್ರ ಅಸೆಂಬ್ಲಿಯತ್ತ ಸಾಗುತ್ತಿದೆ ಎಂದು ಐದು ಎಕ್ಸಿಟ್ ಪೋಲ್‌ಗಳಲ್ಲಿ 4 ಭವಿಷ್ಯ ನುಡಿದಿವೆ ಮತ್ತು ಅವುಗಳಲ್ಲಿ ಬಹುಪಾಲು ಕಾಂಗ್ರೆಸ್‌ಗೆ ಸ್ವಲ್ಪಮಟ್ಟಿನ ಲಾಭವಿರುವ ಕುರಿತು ಭವಿಷ್ಯ ನುಡಿದಿವೆ. ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ ಸೆಕ್ಯುಲರ್ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಹೇಳಿವೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ.ಕೇವಲ ಒಂದು ಎಕ್ಸಿಟ್ ಪೋಲ್ – ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ. ಇನ್ನೆರಡು…

Read More

ಮಧ್ಯಾಹ್ನ 03 ಗಂಟೆ ವರೆಗಿನ ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾನದ ವಿವರ

ಮಧ್ಯಾಹ್ನ 03 ಗಂಟೆಗೆ ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತದಾನ ವಿವರ. 111- ಶಿವಮೊಗ್ಗ ರೂರಲ್ 58.25% 112 – ಭದ್ರಾವತಿ 53.16% 113 – ಶಿವಮೊಗ್ಗ 50.02% 114 – ತೀರ್ಥಹಳ್ಳಿ 60.00% 115 – ಶಿಕಾರಿಪುರ  61.08% 116 – ಸೊರಬ  57.92% 117 – ಸಾಗರ 54.51% ಒಟ್ಟು 55.39%

Read More

ಕುಟುಂಬದವರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬೇಳೂರು ಗೋಪಾಲಕೃಷ್ಣ|election

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರು ಬೇಳೂರು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಪತ್ನಿ ರಂಜಿತರಾಧ ಮತ್ತು ಕುಟುಂಬದ ಸದಸ್ಯರೊಂದಿಗೆ ಬೇಳೂರು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ಹೊಂಬುಜ,ಮೂಲೆಗದ್ದೆ ಮತ್ತು ಮಳಲಿ ಶ್ರೀಗಳಿಂದ ಮತ ಚಲಾವಣೆ|election

ಹೊಂಬುಜ,ಮೂಲೆಗದ್ದೆ ಮತ್ತು ಮಳಲಿ ಶ್ರೀಗಳಿಂದ ಮತ ಚಲಾವಣೆ ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಸರ್ಕಾರಿ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Read More

ಕುಟುಂಬದೊಂದಿಗೆ ಆಗಮಿಸಿ ಮತ ಚಲಾಯಿಸಿದ ಆರಗ ಜ್ಞಾನೇಂದ್ರ|election

ತೀರ್ಥಹಳ್ಳಿ:  ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪದ ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಒಂದೇ ಪಕ್ಷದಿಂದ ದಾಖಲೆಯ ಹತ್ತನೇ ಬಾರಿಗೆ ಸ್ಪರ್ಧಿಸುತ್ತಿರುವ,  ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಕುಟುಂಬದ ಸದಸ್ಯರೊಂದಿಗೆ, ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಹಾಗೂ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read More

ಕುಟುಂಬದವರೊಂದಿಗೆ ಆಗಮಿಸಿ‌ ಮತ ಚಲಾಯಿಸಿದ ಶಾಸಕ ಹರತಾಳು ಹಾಲಪ್ಪ|election

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಹರತಾಳು ಇಂದು ತಮ್ಮ ಪತ್ನಿ ಯಶೋಧ ಹಾಲಪ್ಪ ಮತ್ತು ಕುಟುಂಬದ ಸದಸ್ಯರೊಂದಿಗೆ ಹರತಾಳು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ…

Read More

Election | ಮದ್ಯ ಸೇವಿಸಿ ಚುನಾವಣೆ ಕಾರ್ಯಕ್ಕೆ ಹಾಜರಾದ ಸಿಬ್ಬಂದಿ – ಆರೋಪ : ಇಬ್ಬರು ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ

ರಾಜ್ಯಾದ್ಯಂತ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲು ಸೋಮವಾರ ಆಯಾ ಕ್ಷೇತ್ರಗಳಲ್ಲಿ ಸೋಮವಾರ ಮಸ್ಟರಿಂಗ್‌ ಕಾರ್ಯ ನಡೆದಿದೆ.  ಈ ನಡುವೆ ಮದ್ಯ ಸೇವನೆ ಶಂಕೆ ಮೇರೆಗೆ ಇಬ್ಬರು ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿರುವುದು ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದ ಇಬ್ಬರು ಚುನಾವಣಾ ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಒಬ್ಬರು ತೋಟಗಾರಿಕೆ ಇಲಾಖೆಯ ಸಿಬ್ಬಂದಿ,ಇನ್ನೂಬ್ಬರು…

Read More

SSLC RESULT | ಹೊಸನಗರದ ರಾಮಕೃಷ್ಣ ವಿದ್ಯಾಲಯಕ್ಕೆ ಶೇ 100% ಫಲಿತಾಂಶ – 625ಕ್ಕೆ 619 ಅಂಕ ಪಡೆದ ಜಿ ಎಂ ವಾಣಿ

ಹೊಸನಗರ : 2022 23ನೇ ಸಾಲಿನ ಎಸ್ ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ.  ಶ್ರೀ ರಾಮಕೃಷ್ಣ ವಿದ್ಯಾಲಯ ದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 100 ಫಲಿತಾಂಶ ಗಳಿಸಿ ಕೊಟ್ಟಿದ್ದಾರೆ ರಾಮಕೃಷ್ಣ ಶಾಲೆಯ  625ಕ್ಕೆ 619 (99.04%) ಅಂಕ ಗಳಿಸಿದ್ದಾಳೆ.ಇವರು ಪಟ್ಟಣದ ಗಂಗನಕೊಪ್ಪ ಗ್ರಾಮದ ನಿವಾಸಿ…

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More