Headlines

ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ

Four persons were detained by Belthangady police for illegally hunting turtles from a river to prepare turtle curry for a grandmother’s death ceremony. Turtles were seized and the case was handed over to the Forest Department for further action. ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಅವರು ಬಹಳ ಇಷ್ಟಪಟ್ಟಿದ್ದ ಆಮೆ ಸಾರು…

Read More

ಜಮೀನಿನಲ್ಲಿ ಹೂವಿನ ಗಿಡ ನೆಟ್ಟಿದ್ದಕ್ಕೆ ಅಣ್ಣನಿಂದ ತಮ್ಮನಿಗೆ ಗುಂಡೇಟು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಜಮೀನಿಗೆ ಹೋಗುವ ದಾರಿಯಲ್ಲಿ ಗಿಡಗಳನ್ನು ಹಾಕಿದ್ದಕ್ಕೆ ಸಿಟ್ಟಿಗೆದ್ದ ಅಣ್ಣ ನಾಡ ಬಂದೂಕಿನಿಂದ ತಮ್ಮನಿಗೆ ಶೂಟ್ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ನಡೆದ ಘಟನೆ ಇದಾಗಿದ್ದು, ಭದ್ರಾವತಿ ತಾಲೂಕಿನ ಸಿದ್ದರಮಟ್ಟಿಯಲ್ಲಿ ಮುನಿಸ್ವಾಮಿ ಎಂಬಾತ ತನ್ನ ಸಹೋದರ ಮುರುಗೇಶ್​ನಿಗೆ ನಾಡ ಬಂದೂಕಿನಿಂದ ಶೂಟ್ ಮಾಡಿದ್ದಾನೆ. ಇದರಿಂದ‌ ಮುರುಗೇಶನ ತೊಡೆ ಸೀಳಿ ಹೋಗಿದೆ. ತಕ್ಷಣ ಮುರುಗೇಶ್​ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.  ಸಿದ್ದರಮಟ್ಟಿಯಲ್ಲಿ…

Read More

ಪುರಲೆ ಕೆರೆಗೆ ಹಾರಿದ ಯುವಕ!: ಮಳೆಯ ನಡುವೆ ಶೋಧ ಕಾರ್ಯಾಚರಣೆ.

ಶಿವಮೊಗ್ಗ:ಕಿಡ್ನಿ ಸಮಸ್ಯೆ ಯಿಂದ ಬಳಲುತಿದ್ದ ಯುವಕನೊಬ್ಬ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ. ಪುರಲೆ ನಿವಾಸಿ ಹರೀಶ್ (26) ಕೆರೆಗೆ ಹಾರಿದ್ದು ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಕರೆಸಿದ್ದಾರೆ.ಅಗ್ನಿ ಶಾಮಕ ದಳದ ಸಿಬ್ಬಂದಿ ಶೋದ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ ಆರ್ ಅಶೋಕ್ ನೇತೃತ್ವದಲ್ಲಿ ಕಾರ್ಯಾಚರಣೆ ನೆಡೆಯುತ್ತಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳ ಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು…

Read More

ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…

Read More

ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು

ಹುಂಚ :  ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು  ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…

Read More

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು…

Read More

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…

Read More

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ..!!??

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸ್ಥಳೀಯರು ಆತಂಕದಲ್ಲಿ ಮುಂಜಾನೆಯೇ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರೂ ಸ್ಥಳಕ್ಕೆ ಬರಲು ಮೀನಮೇಷ ಎಣಿಸಿದ್ದಾರೆ,ಇಲಾಖೆಯವರು ನರಬಲಿಗಾಗಿ ಕಾಯುತ್ತಿದ್ದಾರೋ ಏನೋ..?…

Read More

ರಿಪ್ಪನ್ ಪೇಟೆ : ಎರಡು ತಿಂಗಳು ಜೀವನ್ಮರಣ ಹೋರಾಟ ನಡೆಸಿದ್ದ ಮಗು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ್ದ ಹಸುಗೂಸು  ಚಿಕಿತ್ಸೆಗೆ ಸ್ಪಂದಿಸದೇ ಇಂದು ಮಧ್ಯಾಹ್ನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಹದಿನೈದು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್…

Read More

Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್

ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು  ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ  ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ…

Read More