Headlines

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

ಆಯನೂರು ಕ್ಯಾಷಿಯರ್ ಕೊಲೆ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ – ಆರೋಪಿಗಳ ಕಾಲಿಗೆ ಗುಂಡು|shot

ಆಯನೂರಿನ ನವರತ್ನ ಬಾರ್ ನಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ, ಆರೋಪಿಗಳನ್ನ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಸತೀಶ್ ಹಲ್ಲೆ ಮಾಡಲು ಮುಂದಾಗಿದ್ಧಾನೆ. ಈ ವೇಳೆ ಪೊಲೀಸರು ರಕ್ಷಣಾತ್ಮಕವಾಗಿ ಆತನ ಕಾಲಿಗೆ ಗುಂಡು ಹೊಡೆದಿದ್ಧಾರೆ.  ಸತೀಶ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಎಸ್​ಐ ರಾಜು ರೆಡ್ಡಿಯವರು ಆರೋಪಿ ಕಾಲಿಗೆ ಗುಂಡು ಹೊಡೆದು ಆತನನ್ನ ಬಂಧಿಸಿದ್ದಾರೆ. ನಿನ್ನೆ ಮಧ್ಯರಾತ್ರಿ ನಡೆದಿದ್ದ ಕೊಲೆ ಸಂಬಂಧ ಆರೋಪಿ ಸತೀಶ್​ನನ್ನ ಬಂಧಿಸಲು…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು – ಓರ್ವ ಸಾವು|accident

ಶಿವಮೊಗ್ಗ ಹೊರವಲಯದಲ್ಲಿ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರನ್ನ ಚಲಾಯಿಸಿಕೊಂಡು ಬಂದ ವ್ಯಕ್ತಿ ಸಾವನ್ನಪ್ಪಿದ್ದಾನೆ.ಸೋಮವಾರ ಸಂಜೆ ಸುಮಾರು 4-45 ರ ವೇಳೆಗೆ ಶಿವಮೊಗ್ಗದಿಂದ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮಕ್ಕೆ ಕಿಯಾ ಕಾರಿನಲ್ಲಿ ಏಕಾಂಗಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಶರತ್ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. 29 ವರ್ಷದ ಯುವಕ ಶರತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ಠಾಣ ವ್ಯಾಪ್ತಿಯಲ್ಲಿ…

Read More

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ|araga

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ಗೃಹ ಸಚಿವನಾಗಿ ಕ್ಷೇತ್ರದ ರಾಜ್ಯ ಸುತ್ತಿದರೂ ಕೂಡಾ ಕ್ಷೇತ್ರದ ಮತದಾರರ ಮತ್ತು ಕಾರ್ಯಕರ್ತರ  ಮೂಲಭೂತ  ಸಮಸ್ಯೆಗಳಿಗೆ ಸ್ಪಂದಿಸಿ ಗತ್ತು ಗೈರತು ಜನರೊಂದಿಗೆ ಬೆರತು ಪ್ರೀತಿ ವಿಶ್ವಾಸದಿಂದಿರುವುದಕ್ಕೆ ಮರು ಅಯ್ಕೆ ಮಾಡಿದ್ದಾರೆಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆದ್ದಾರಿಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು…

Read More

ಆಯನೂರು ಬಾರ್ ಕ್ಯಾಶಿಯರ್’ಗೆ ಚೂರಿ ಇರಿದು ಕೊಲೆ – ಪೊಲೀಸರ ಎದುರಲ್ಲೇ ನಡೆಯಿತಾ ಈ ಘಟನೆ…????

ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆಯನೂರಿನಲ್ಲಿರುವ ಬಾರ್’ನಲ್ಲಿ ಕ್ಯಾಶಿಯರ್ ಒಬ್ಬನಿಗೆ ಪೊಲೀಸರೆದುರಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಸೊರಬ ಮೂಲದ ಸಚಿನ್ (27) ಹತ್ಯೆಯಾದ ಯುವಕನಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಚಾಕುದಿಂದ ಚುಚ್ಚಿದ್ದು ತೀವ್ರ ಗಾಯಗೊಂಡ ಈತನನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ. ಘಟನೆಯ ಹಿನ್ನಲೆ ಕಳೆದ ಹಲವು ದಿನಗಳಿಂದ ಬಾರ್ ನಲ್ಲಿ ಕುಡಿದು ಹಣ ನೀಡದ ಹೋಗುತ್ತಿದ್ದ ಆಯನೂರು ತಾಂಡಾ ನಿವಾಸಿಗಳಾದ ನಿರಂಜನ್ ,ಸತೀಶ್ ಹಾಗೂ ಅಶೋಕ್…

Read More

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ – ರಿಪ್ಪನ್ ಪೇಟೆ ಮೂಲದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು|accident

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಸನಗರ ತಾಲೂಕಿನ…

Read More

ಕಾರು ಡಿಕ್ಕಿಯಾಗಿ ಜಿಂಕೆ ಸಾವು|deer

ಶಿವಮೊಗ್ಗ ಜಿಲ್ಲೆಯ ಚೋರಡಿ ಸಮೀಪ ಭಾನುವಾರ ಸಂಜೆ ವಾಹನಕ್ಕೆ ಡಿಕ್ಕಿಯಾಗಿ ಜಿಂಕೆಯೊಂದು ಸಾವಿಗೀಡಾದ ಘಟನೆ ನಡೆದಿದೆ.  ಬಿ.ಹೆಚ್.ರಸ್ತೆಯ ಕುಮದ್ವತಿ ಸೇತುವೆಗೆ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗ ಕಡೆ ಬರುತಿದ್ದ ಇನ್ನೋವಾ ಕಾರಿಗೆ ವೇಗವಾಗಿ ರಸ್ತೆ ದಾಟುತಿದ್ದ ಗಂಡು ಜಿಂಕೆಯೊಂದು ಡಿಕ್ಕಿ ಹೊಡೆದಿದೆ. ಚಾಲಕನ ಗಮನಕ್ಕೆ ಬಾರದೆ ಏಕಾಏಕಿ ರಸ್ತೆ ದಾಟಿದ ಜಿಂಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ. …

Read More

ಹೊಸನಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಧಂಧೆಕೋರರಿಗೆ ಬಿಸಿ ಮುಟ್ಟಿಸಿದ ಪೊಲೀಸ್ – 14 ವಾಹನ ವಶಕ್ಕೆ

ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ 14 ಕಡೆಗಳಲ್ಲಿ ದಾಳಿ ಅಕ್ರಮ ಮರಳು ಸಾಗಾಟ ಮತ್ತು ಸಂಗ್ರಹಣೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದು 14 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ, ತೀರ್ಥಹಳ್ಳಿ ಡಿವೈಎಸ್.ಪಿ ಗಜಾನನ ವಾಮನ ಸುತರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.  ಹೊಸನಗರ ವೃತ್ತದ ಪಿಐ ಗಿರೀಶ್, ಪಿಎಸ್ಐ ನೀರಜ್ ನರಲಾರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಹೊಸನಗರ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ದಾಳಿ…

Read More

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More